Advertisement

ಶವರ್ಮ ಸೇವನೆ: ವಿದ್ಯಾರ್ಥಿನಿಯ ಸಾವಿಗೆ ವಿಷ ಪದಾರ್ಥವೇ ಕಾರಣ

11:57 PM May 03, 2022 | Team Udayavani |

ಕಾಸರಗೋಡು: ಚೆರ್ವತ್ತೂರಿನ ಕೂಲ್‌ ರೆಸ್ಟೋರೆಂಟ್‌ನಲ್ಲಿ ಶವರ್ಮ ಸೇವಿಸಿದ ಪಿಯುಸಿ ವಿದ್ಯಾರ್ಥಿನಿ ಕರಿವೆಳ್ಳೂರು ಪೇರಳದ ದೇವನಂದ (16) ಸಾವಿಗೆ ವಿಷ ಪದಾರ್ಥ ಸೇವನೆಯೇ ಕಾರಣವೆಂದು ಪರಿಯಾರಂ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ನಡೆಸಿದ ಪೋಸ್ಟ್‌ಮಾರ್ಟಂ ರಿಪೋರ್ಟ್‌ನಲ್ಲಿ ತಿಳಿಸಿದೆ.

Advertisement

ಶವರ್ಮ ಸೇವಿಸಿ ಕಾಂಞಂಗಾಡ್‌ನ‌ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ಮಕ್ಕಳಿಗೆ ಶಿಗೆಲ್ಲಾ ಸೋಂಕು ಪತ್ತೆಯಾಗಿದೆ. ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ಬಾಲಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲ್‌ ರೆಸ್ಟೋರೆಂಟ್‌ ಮ್ಯಾನೇಜರ್‌, ಕಾಸರಗೋಡು ನಿವಾಸಿ ಟಿ. ಅಹಮ್ಮದ್‌ನನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ ಮೂರಕ್ಕೇರಿದೆ.

 

Advertisement

Udayavani is now on Telegram. Click here to join our channel and stay updated with the latest news.

Next