Advertisement

ಕೋಟ: ಬಸ್‌ ಢಿಕ್ಕಿ; ಸ್ಕೂಟರ್‌ ಸವಾರ ಸಾವು

12:50 AM May 08, 2022 | Team Udayavani |

ಕೋಟ: ಬಸ್‌ ಢಿಕ್ಕಿಯಾಗಿ ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ಸಾಲಿಗ್ರಾಮ ಗುರುನರಸಿಂಹ ದೇಗುಲದ ಎದುರಿನ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

Advertisement

ಬನ್ನಾಡಿ ಸಮೀಪ ಉಪ್ಲಾಡಿ ಬಡಾಬೆಟ್ಟು ನಿವಾಸಿ ಶೀನ ಪೂಜಾರಿ (56) ಮೃತರು.ಶೀನ ಪೂಜಾರಿ ಗುರುನರಸಿಂಹ ದೇವಸ್ಥಾನದ ಕಡೆಯಿಂದ ಕೋಟ ಕಡೆಗೆ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಕುಂದಾಪುರದ ಕಡೆಗೆ ಚಲಿಸುತ್ತಿದ್ದ ಬಸ್‌ ಸ್ಕೂಟರ್‌ನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಗಂಭೀರ ಗಾಯಗೊಂಡಿದ್ದರು.

ತತ್‌ಕ್ಷಣ ಮಣಿಪಾಲ ಆಸ್ಪತ್ರೆಗೆ ಗಾಯಾಳುವನ್ನು ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next