Advertisement

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನ

07:21 PM Oct 13, 2021 | Shreeram Nayak |

ಮುದ್ದೇಬಿಹಾಳ: ತಾಲೂಕಿನ ತಂಗಡಗಿ ಗ್ರಾಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಅಪ್ರಾಪ್ತೆಯೊಬ್ಬಳನ್ನು ಆಕೆ ಬಹಿರ್ದೆಸೆಗೆ ಹೋದಾಗ ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಅದೇ ಗ್ರಾಮದ ಶಿವಯ್ಯ ಜಂಬಯ್ಯ ರುದ್ರಸ್ವಾಮಿಮಠ (32) ಎಂಬಾತನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

Advertisement

ಮಂಗಳವಾರ ಬೆಳಿಗ್ಗೆ ಆಕೆ ಬಹಿರ್ದೆಸೆಗೆ ಹೋದಾಗ ಆರೋಪಿ ಆಕೆಯನ್ನು ತನ್ನ ಸಹಚರರೊಂದಿಗೆ ಅಪಹರಿಸಿದ್ದು ಅತ್ಯಾಚಾರ ಎಸಗಿದ ನಂತರ ಆಕೆಯ ಮೈಮೇಲಿದ್ದ ಚಿನ್ನದ ಒಡವೆಗಳನ್ನು ದೋಚಿದ್ದಾನೆ ಎನ್ನಲಾಗುತ್ತಿದೆ.

ಸಂಜೆಯಾದರೂ ಮಗಳು ಮನೆಗೆ ಬರಲಿಲ್ಲವಲ್ಲ ಎಂದು ಪಾಲಕರು ಎಲ್ಲ ಕಡೆ ಹುಡುಕಾಡಿದ್ದಾರೆ. ಸಂಜೆ ಆಕೆ ಮನೆಗೆ ಬಂದು ವಿಷಯ ತಿಳಿಸಿದಾಗಲೇ ಅತ್ಯಾಚಾರ ನಡೆದದ್ದು ಗೊತ್ತಾಗಿದೆ.

ಇದನ್ನೂ ಓದಿ:ಹಾನಗಲ್ಲ ಉಪಚುನಾವಣೆ : ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು

ರಾತ್ರಿಯೇ ಪೊಲೀಸ್ ಠಾಣೆಗೆ ಬಂದು ಪ್ರಕರಣ ದಾಖಲಿಸಲು ಆಕೆಯ ಪಾಲಕರು ಮುಂದಾಗಿದ್ದಾರೆ. ಆದರೆ ತಕ್ಷಣಕ್ಕೆ ಪ್ರಕರಣ ದಾಖಲಾಗಿಲ್ಲ. ಮರುದಿನ ಬರುವಂತೆ ಹೇಳಿ ಮರಳಿ ಕಳಿಸಿದ್ದಾರೆ. ಬುಧವಾರ ಬೆಳಿಗ್ಗೆ ಪ್ರಕರಣದ ಗಂಭೀರತೆ ಅರಿತ ಪೊಲೀಸರು ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತಂದ ಮೇಲೆ ಸಂಜೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಸಧ್ಯ ಆಕೆಯನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕಳಿಸಿಕೊಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next