Advertisement

ಮಡಿಕೇರಿ: ದಬ್ಬಡ್ಕ ಅರಣ್ಯದಲ್ಲಿ ಕಡವೆ ಬೇಟೆ: ಇಬ್ಬರ ಬಂಧನ

12:43 AM Oct 19, 2022 | Team Udayavani |

ಮಡಿಕೇರಿ: ದಬ್ಬಡ್ಕ ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಾಜೆ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬಂದಿ ಬಂಧಿಸಿದ್ದಾರೆ.

Advertisement

ದಬ್ಬಡ್ಕ ಗ್ರಾಮ ನಿವಾಸಿಗಳಾದ ಕೃಷ್ಣಪ್ಪ(47) ಹಾಗೂ ಪುರುಷೋತ್ತಮ ಕೆ.ಎಸ್‌. (48) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ ಸುಮಾರು 100 ಕೆ.ಜಿ. ಕಡವೆ ಮಾಂಸ, ಕತ್ತಿ, ಟಾರ್ಪಲ್‌ ಮತ್ತಿತ್ತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಹಾಗೂ ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂದನ್‌ ಎಂ.ಕೆ. ಮಾರ್ಗದರ್ಶನದಲ್ಲಿ ಅರಣ್ಯ ರಕ್ಷಕರಾದ ಕಾರ್ತಿಕ್‌, ವೀಕ್ಷಕರಾದ ಕೂಸಪ್ಪ, ಮನೋಜ್‌ ಕುಮಾರ್‌ ಕಾರ್ಯಾಚರಣೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next