Advertisement

ಕೌಟುಂಬಿಕ ಕಲಹ: ಪತ್ನಿ-ಪುತ್ರನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ

03:39 PM Aug 05, 2022 | Team Udayavani |

ಮಳವಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ ಮತ್ತು ಮಗನ ಮೈಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನೆಟ್ಕಲ್ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ ಸಿದ್ದೇಗೌಡ ಎಂಬುವವರೇ ಪತ್ನಿ ಮತ್ತು ಮಗನಿಗೆ ಹಚ್ಚಿದ ಪತಿಯಾಗಿದ್ದು, ಬುಧವಾರ ರಾತ್ರಿ ಕ್ಷುಲಕ ಕಾರಣಕ್ಕೆ ಪತ್ನಿ ಮಹದೇವಮ್ಮ ಜೊತೆಗೆ ಜಗಳ ಆರಂಭವಾಗಿದ್ದು, ಜಗಳ ವಿಕೋಪಕ್ಕೆ ಹೋದಾಗ ಪತ್ನಿಯ ಮೈ ಮೇಲೆ ಸೀಮೆ ಎಣ್ಣೆ ಸುರಿಯುತ್ತಿದ್ದ ವೇಳೆ ತಡೆಯಲು ಬಂದ ಮಗ ಸಿದ್ದರಾಜು ಮೇಲೂ ಸಹ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾರೆ. ಘಟನೆಯಲ್ಲಿ ಮಹದೇವಮ್ಮ ಹಾಗೂ ಸಿದ್ದರಾಜು ಅವರಿಗೆ ತೀವ್ರ ಗಾಯವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ:ಪಾನ್ ಇಂಡಿಯಾ ಸಿನಿಮಾದಂತೆ ಪಾನ್ ಇಂಡಿಯಾ ಮಾತಿಗೆ ಸಾಥ್ ನೀಡುತ್ತಿದೆ ಕೂ ಆಪ್‌ನ MLK ಫೀಚರ್

ಗಲಾಟೆ ಜೋರಾದ ಹಿನ್ನಲೆಯಲ್ಲಿ ಅಕ್ಕಪಕ್ಕದ ಮನೆಯವರು ಗಾಯಾಳುಗಳನ್ನು ತಕ್ಷಣವೇ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಬೆಳಕವಾಡಿ ಪಿಎಸ್ಐ ವಿ.ಸಿ.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಕೃತ್ಯ ಎಸಗಿದ್ದ ಸಿದ್ದೇಗೌಡನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಬೆಳಕವಾಡಿ ಪೊಲೀಸರು ಗುರುವಾರ ರಾತ್ರಿ ಆರೋಪಿಯನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next