ಮಂಗಳೂರು : ಉಪನ್ಯಾಸಕಿಯೊಬ್ಬರಿಗೆ ಗಿಫ್ಟ್ ಕೊಡಲಿದೆ ಎಂದು ಹೇಳಿ ಅಪರಿಚಿತನೋರ್ವ ಬ್ಯಾಗ್ ನಿಂದ ಮಚ್ಚು ತೆಗೆದು ಮೂವರು ಮಹಿಳಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್ )ಯಲ್ಲಿ ಮಧ್ಯಾಹ್ನ ನಡೆದಿದೆ.
ಸಿಬ್ಬಂದಿಗಳಾದ ನಿರ್ಮಲಾ, ರೀನಾ, ಗುಣವತಿ ಹಲ್ಲೆಗೊಳಗಾದವರು.
ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಜೈಲು ರಸ್ತೆಯಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ಆಗಮಿಸಿದ ಅಪರಿಚಿತನೋರ್ವ ಉಪನ್ಯಾಸಕಿಯೋರ್ವರ ಹೆಸರು ಹೇಳಿ ಅವರಿಗೆ ಗಿಫ್ಟ್ ಕೊಡಲಿಕ್ಕಿದೆ ಎಂದು ಹೇಳಿ ಬ್ಯಾಗ್ ನಿಂದ ಮಚ್ಚು ತೆಗೆದು ಮೂವರು ಮಹಿಳಾ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿದ್ದಾನೆ.
ಈ ವೇಳೆ ಸಿಬ್ಬಂದಿಗಳು ಜೋರಾಗಿ ಬೊಬ್ಬೆ ಹೊಡೆದಿದ್ದಾರೆ ಈ ವೇಳೆ ಅಲ್ಲೇ ಪಕ್ಕದಲ್ಲಿದ್ದ ಪೊಲೀಸ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ವ್ಯಕ್ತಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ನವೀನ್ (31) ಎನ್ನಲಾಗಿದ್ದು ಈತ ಕುಂದಾಪುರದ ಕೋರ್ಟ್ ನಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿ :ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಘಟನೆಯಲ್ಲಿ ಗಾಯಗೊಂಡ ಮಹಿಳಾ ಸಿಬ್ಬಂದಿಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರು ಅಪಾಯದಿಂದ ಪಾರಾಗಿದ್ದಾರೆ.
ಪೊಲೀಸ್ ಆಯುಕ್ತ ಶಶಿ ಕುಮಾರ್, ಜಿ ಪಂ ಸಿಇಒ ಡಾ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.