Advertisement

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

09:06 PM Jul 02, 2024 | Team Udayavani |

ಪತ್ನಿಗೆ ಚೂರಿಯಿಂದ ಹಲ್ಲೆ; ಪರಾರಿಯಾಗಿದ್ದ ಆರೋಪಿ ಪತಿಯ ಬಂಧನ

Advertisement

ಸುಳ್ಯ: ಪತಿ-ಪತ್ನಿ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಜಗಳ ನಡೆದು ಪತಿಯೇ ಪತ್ನಿಗೆ ಚೂರಿಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನವೀನ್‌ ಕುಮಾರ್‌ ಬಂಧಿತ ಆರೋಪಿ.

ತನಿಖೆ ನಡೆಸಿದ ನ್ಯಾಯಾಲಯ ಆರೋಪಿ ನವೀನ್‌ ಕುಮಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವಿನೋಬ ನಗರದ ನವೀನ್‌ ಕುಮಾರ್‌ ಹಾಗೂ ಅವರ ಪತ್ನಿ ಅಶ್ವಿ‌ನಿ ಅವರ ಮಧ್ಯೆ ಜೂ.29ರಂದು ರಾತ್ರಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ನವೀನ್‌ ಅವರ ಪತ್ನಿ ಅಶ್ವಿ‌ನಿ ಅವರಿಗೆ ಚೂರಿಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಗಾಯಗೊಂಡ ಆಶ್ವಿ‌ನಿ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಘಟನೆ ಬಗ್ಗೆ ಸುಳ್ಯ ಠಾಣೆಗೆ ದೂರು ನೀಡಲಾಗಿತ್ತು, ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Advertisement

ಕಲ್ಲು ಎತ್ತಿ ಹಾಕಿ ಕೊಲೆಗೈದ ಆರೋಪಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಸುಳ್ಯ: ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಆರೋಪಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಧೀಶರು ಆದೇಶ ನೀಡಿದ್ದಾರೆ.

ಸುಳ್ಯದ ಕಾಂತಮಂಗಲ ಶಾಲೆಯ ಜಗಲಿಯಲ್ಲಿ ಮಲಗಿದ್ದ ವೀರಾಜಪೇಟೆ ನಿವಾಸಿ ವಸಂತ ನಾಯ್ಕ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಎಡಮಂಗಲದ ಉದಯ ನಾಯ್ಕನನ್ನು ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next