Advertisement

ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರ ಬರೆದು ನಾಪತ್ತೆಯಾಗಿದ್ದ ಎಂಜಿನಿಯರ್‌ ಪತ್ತೆ!

10:00 PM May 19, 2022 | Team Udayavani |

ಸುರತ್ಕಲ್‌ : ಎಂಆರ್‌ಪಿಎಲ್‌ ಸಂಸ್ಥೆಯಲ್ಲಿ ಎಂಜಿನಿಯರ್‌ ಆಗಿ ಕರ್ತವ್ಯದಲ್ಲಿದ್ದ ರಾಘವೇಂದ್ರ ಕೆ.ಆರ್‌ ಕ್ಷಮಿಸಿ, ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರ ಬರೆದಿಟ್ಟು ಮೇ 16ರಂದು ನಾಪತ್ತೆಯಾಗಿದ್ದವರು,ಶುಕ್ರವಾರ ಪ್ರತ್ಯಕ್ಷರಾಗಿದ್ದಾರೆ.

Advertisement

ಎಫ್‌ಐಆರ್‌ ದಾಖಲಾಗಿರುವ ಕಾರಣ ಸುರತ್ಕಲ್‌ ಪೊಲೀಸ್‌ ಠಾಣೆಗೆ ಬಂದು ಮಾಹಿತಿ ನೀಡಿದರು. ಕುಟುಂಬದಲ್ಲಿ ಭಿನ್ನಾಭಿಪ್ರಾಯದಿಂದ ಮನಃಶಾಂತಿಗಾಗಿ ಮಂತ್ರಾಲಯಕ್ಕೆ ತೆರಳಿದ್ದೆ ಎಂದು ಸಮಜಾಯಿಷಿ ನೀಡಿದ್ದು, ಪೊಲೀಸರು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಚೀಟಿ ಬರೆದಿಟ್ಟು ಆಧಾರ್‌ ಕಾರ್ಡ್‌,ಎಟಿಎಂ,ಕೀ ಪ್ಯಾಡ್‌,ಔಷಧ ಬಿಟ್ಟು ಹೋಗಿದ್ದು ಆತಂಕಕ್ಕೆ ಎಡೆ ಮಾಡಿಕೊಟ್ಟಿತ್ತು.

ಇದನ್ನೂ ಓದಿ : ಗೂಡ್ಸ್ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು, ಇನ್ನೋರ್ವನಿಗೆ ಗಾಯ

Advertisement

Udayavani is now on Telegram. Click here to join our channel and stay updated with the latest news.

Next