Advertisement

ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

12:36 AM Oct 10, 2022 | Team Udayavani |

ಉಳ್ಳಾಲ: ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಚೆಂಬುಗುಡ್ಡೆಯ ಯುವಕನ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಇದೊಂದು ಕೊಲೆ ಎನ್ನುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.

Advertisement

ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ನಿವಾಸಿ ಝಾಕಿರ್‌ (36) ಮೃತರು. ಮೀನು ವ್ಯಾಪಾರಿಯಾಗಿದ್ದ ಅವರಿಗೆ ಪತ್ನಿ, ಏಳು ವರ್ಷದ ಮಗ ಇದ್ದು, ಪತ್ನಿ ಏಳು ತಿಂಗಳ ಗರ್ಭಿಣಿ. ಸೆ. 26ರಂದು ತೊಕ್ಕೊಟ್ಟಿಗೆ ಹೋಗಿ ಬರುವುದಾಗಿ ಹೋಗಿದ್ದ ಝಾಕಿರ್‌ ನಾಪತ್ತೆಯಾಗಿದ್ದು, ಮೊಬೈಲ್‌ ರಿಂಗ್‌ ಆಗಿ ಸ್ವಿಚ್‌ಆಫ್‌ ಆಗುತ್ತಿತ್ತು. 10 ದಿ® ಕಳೆದರೂ ಸಂಪರ್ಕಕ್ಕೆ ಸಿಗದ ಕಾರಣ ಯುವಕನ ಫೂಟೋ ಮತ್ತು ವಿವರವನ್ನು ಜಾಲತಾಣದಲ್ಲಿ ಹರಿಯಬಿಡಲಾಗಿತ್ತು. ಅವರು ಧರಿಸಿದ್ದ ಬಟ್ಟೆ, ಬೆಲ್ಟ್ ಗುರುತಿನ ಮೇರೆಗೆ ವಾರದ ಹಿಂದೆಯೇ ಮಂಜೇಶ್ವರ ಸಮುದ್ರದಲ್ಲಿ ಶವ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭಿಸಿತ್ತು.

ಅಪರಿಚಿತ ಶವವಾಗಿದ್ದ ಕಾರಣ ಮಂಗಲ್ಪಾಡಿ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಕೆಲವು ದಿನ ಇಡಲಾಗಿದ್ದು, ಪೋಷಕರು ಬಾರದ ಹಿನ್ನೆಲೆಯಲ್ಲಿ ಸಮೀಪದ ಮಸೀದಿಯಲ್ಲಿ ದಫನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಯುವಕನ ಬೈಕ್‌ ಸೋಮೇಶ್ವದಲ್ಲಿ ಪತ್ತೆಯಾಗಿದೆ. ಇದೊಂದು ಕೊಲೆಯಾಗಿದೆ. ಮೃತದೇಹದಲ್ಲಿ ಗಾಯದ ಗುರುತು ಗಳು ಪತ್ತೆಯಾಗಿವೆ. ಅವರ ಮೊಬೈಲ್‌ ಪತ್ತೆಯಾಗಿಲ್ಲ. ಮೃತದೇಹವನ್ನು ಚೆಂಬುಗುಡ್ಡೆಗೆ ತಂದು ಮರು ದಫನ ಮಾಡಲಾಗುವುದು ಎಂದು ಸಹೋದರ ಅಶ್ರಫ್‌ ಹರೇಕಳ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next