Advertisement

ಬಿಜೆಪಿ ಬಂದ ನಂತರ ಕೊಲೆಗಳು ಹೆಚ್ಚಾಗಿವೆ, ತಲೆ ಒಡೆಯುವ ವಾತಾವರಣ ಸೃಷ್ಟಿಯಾಗಿದೆ: ಎಚ್ ಡಿಕೆ

04:29 PM Apr 11, 2022 | Team Udayavani |

ರಾಮನಗರ: ಬಿಜೆಪಿ ಬಂದ ನಂತರ ಕೊಲೆಗಳು ಹೆಚ್ಚಾಗಿವೆ. ತಲೆ ಒಡೆಯುವ ವಾತಾವರಣ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

Advertisement

ಕೇತಗಾನಹಳ್ಳಿಯ ತೋಟದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವು ತಲೆ ಒಡೆಯುತ್ತಿರಿ, ನಾವು ಕನಿಕರ ವ್ಯಕ್ತ ಪಡಿಸುತ್ತಲೇ ಇರುತ್ತೇವೆ ಎಂದು ಆಕ್ರೋಶ ಹೊರಹಾಕಿದರು.

ಜಮೀರ್ ಅಹಮದ್, ಚಲುವರಾಯ ಸ್ವಾಮಿ, ಬಾಲಕೃಷ್ಣ ಮತ್ತೆ ಜೆಡಿಎಸ್ ಪಕ್ಷಕ್ಕೆ ವಾಪಸ್ ಬಂದರೆ ಕರೆದುಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರ ಪಕ್ಷದ ಮುಂದೆ ಇಲ್ಲ. ಕೆಲವರನ್ನು ಪಕ್ಷಕ್ಕೆ ವಾಪಸ್ಸು ಕರೆದುಕೊಳ್ಳದಂತೆ ಪಕ್ಷದ ಕಾರ್ಯಕರ್ತರೇ ಒತ್ತಡ ಹೇರುತ್ತಿದ್ದಾರೆ ಎಂದರು.

ಇದನ್ನೂ ಓದಿ:ಆರಗ ಜ್ಞಾನೇಂದ್ರ ವಿರುದ್ಧ ಬಿ.ಕೆ.ಹರಿಪ್ರಸಾದ್ ವಿವಾದಾತ್ಮಕ ಟೀಕೆ

ರಾಜ್ಯದ 15 ಪ್ರಮುಖ ನದಿಗಳಿಂದ ನೀರು ಸಂಗ್ರಹ ಕಾರ್ಯಕ್ರಮ ಜನತಾ ಜಲಧಾರೆಗೆ ನಾಳೆ ರಾಮನಗರದಲ್ಲಿ ಚಾಲನೆ ಸಿಗಲಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next