Advertisement

ಆಸ್ತಿ ತಕರಾರು : ಪೆರಾಜೆಯಲ್ಲಿ ಯುವಕನ ಕೊಲೆ

12:31 PM May 09, 2020 | sudhir |

ಸುಳ್ಯ : ಆಸ್ತಿ ತಕರಾರಿನ ಹಿನ್ನಲೆಯಲ್ಲಿ ತನ್ನ ಮನೆಗೆ ಪಾನಮತ್ತನಾಗಿ ಹೊಕ್ಕ ಮೈದುನನ್ನು ಅತ್ತಿಗೆ ಹಾಗೂ ಆಕೆಯ ಮಗ ಸೇರಿ ಕತ್ತಿಯಿಂದ ಕಡಿದ ಪರಿಣಾಮ ಮೈದುನ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಪೆರಾಜೆಯಲ್ಲಿ ನಡೆದಿದೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಕತ್ತಿಯಿಂದ ಕಡಿದ ಅತ್ತಿಗೆ ಮತ್ತು ಆಕೆಯ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಪೆರಾಜೆ ಗ್ರಾಮದ ಪೀಚೆ ಎಂಬಲ್ಲಿ  ಶುಕ್ರವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ. ಪೀಚೆ ಮನೆಯ ಶ್ರೀಮತಿ ತಾರಿಣಿ ಹಾಗೂ ಉತ್ತರಕುಮಾರ ಎಂಬವರ ಜಾಗ ಅಕ್ಕಪಕ್ಕದಲ್ಲಿದ್ದು, ಸಂಬಂಧದಲ್ಲಿ ಇವರು ಅತ್ತಿಗೆ ಮತ್ತು ಮೈದುನ. ಇವರೊಳಗೆ ಆಸ್ತಿ ತಕರಾರು ಇತ್ತು. ನಿನ್ನೆ ಮಧ್ಯರಾತ್ರಿ ಉತ್ತರಕುಮಾರ ಪಾನಮತ್ತನಾಗಿ ತಾರಿಣಿಯವರ ಮನೆಯಂಗಳಕ್ಕೆ ಬಂದು ಬೈಯ್ಯತೊಡಗಿದರೆನ್ನಲಾಗಿದೆ ನಂತರ ಅವರ ಮನೆ ಹೊಕ್ಕಲು ಪ್ರಯತ್ನ ಪಟ್ಟಾಗ ತಾರಿಣಿ ಮತ್ತು ಆಕೆಯ ಪುತ್ರ ಧರಣೀಧರ ಕತ್ತಿಯಿದ ಕಡಿದಿದ್ದಾರೆ ಗಂಭೀರ ಗಾಯಗೊಂಡು ಕುಸಿದು ಬಿದ್ದ ಉತ್ತರಕುಮಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆನ್ನಲಾಗಿದೆ.

ಇಂದು ಬೆಳಿಗ್ಗೆ ಮಡಿಕೇರಿಯಿಂದ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ. ತಾರಿಣಿ ಮತ್ತು ಧರಣೀಧರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಆಸ್ತಿ ವೈಷಮ್ಯ

ಪೀಚೆ ಮನೆಯ ದಿ.ಸಣ್ಣಯ್ಯ ಮತ್ತು ದಿ.ಮುದ್ದಯ್ಯ ಸಹೋದರರು. ಸಣ್ಣಯ್ಯ ಗೌಡರ ಪುತ್ರ ದಿ.ಕೇಶವ, ಇವರ ಪತ್ನಿ ತಾರಿಣಿ. ಮುದ್ದಯ್ಯರವರ ಪುತ್ರ ಉತ್ತರಕುಮಾರ. ಆಸ್ತಿ ವಿಂಗಡಣೆಗೆ ಸಂಬಂಧಿಸಿ ತಾರಿಣಿ ಹಾಗೂ ಉತ್ತರಕುಮಾರರ ಮಧ್ಯೆ ವಿವಾದವಿತ್ತು. ಅವರ ಮಧ್ಯೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಕೆಲವು ತಿಂಗಳ ಹಿಂದೆ ತಾರಿಣಿಯವರ ಮನೆಗೆ ಸಂಬಂಧಿಕರೊಬ್ಬರು ಬಂದಿದ್ದಾಗ ಇವರು ಮಾಡಿಕೊಟ್ಟ ಚಹಾದಲ್ಲಿ ವಿಷ ಬೆರೆಸಿದ ಆರೋಪವನ್ನು ಉತ್ತರ ಮತ್ತು ಭವಾನಿಶಂಕರರ ಮೇಲೆ ತಾರಿಣಿಯವರು ಹೊರಿಸಿದ್ದರು. ಈ ಬಗ್ಗೆ ತಾರಿಣಿಯವರು ಪೊಲೀಸರಿಗೆ ದೂರನ್ನು ಕೂಡಾ ನೀಡಿದ್ದರು. ಆದರೆ ಅದು ತನಿಖೆಯಾಗಿಲ್ಲವೆನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next