Advertisement

ಗುಂತಕಲ್-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಬೋಗಿಯಲ್ಲಿ ಬರ್ಬರ ಕೊಲೆ!

12:12 PM Nov 11, 2022 | Team Udayavani |

ಹುಬ್ಬಳ್ಳಿ: ಗುಂತಕಲ್-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಸಾಮಾನ್ಯ ಬೋಗಿಯಲ್ಲಿ ಗುರುವಾರ ತಡರಾತ್ರಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

Advertisement

ರೈಲು ತಡರಾತ್ರಿ ಬ್ಯಾಹಟ್ಟಿಗೆ ಬಂದಾಗ ವ್ಯಕ್ತಿಯ ಕೊಲೆಯಾಗಿರುವುದು ಕಂಡುಬಂದಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ತೆರಳಿ ಪರಿಶೀಲಿಸಿದ್ದಾರೆ. ರೈಲಿನ ಸಿಬ್ಬಂದಿಯು ಆ ಬೋಗಿಯನ್ನು ಪ್ರತ್ಯೇಕಿಸಿ ಬ್ಯಾಹಟ್ಟಿಯಲ್ಲೇ ನಿಲ್ಲಿಸಿದ್ದಾರೆ.

ಇದನ್ನೂ ನೋಡಿ:ಟೀಂ ಇಂಡಿಯಾವನ್ನು ಅತ್ಯಂತ ಕಳಪೆ ಎಂದು ಜರಿದ ಮೈಕಲ್ ವಾನ್

ಕೊಲೆಯಾದ ವ್ಯಕ್ತಿ ಯಾರು ಹಾಗೂ ಯಾವ ಕಾರಣಕ್ಕಾಗಿ ಯಾರು ಹತ್ಯೆಗೈದಿದ್ದಾರೆಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next