Advertisement

Diganth – Sangeetha; ಕ್ರೈಮ್ ಥ್ರಿಲ್ಲರ್ ‘ಮಾರಿಗೋಲ್ಡ್‌’ ತೆರೆಗೆ

11:01 AM Apr 05, 2024 | Team Udayavani |

ಕ್ರೈಮ್‌ ಥ್ರಿಲ್ಲರ್‌ “ಮಾರಿಗೋಲ್ಡ್‌’ ಚಿತ್ರ ಇಂದು ತೆರೆಕಾಣುತ್ತಿದೆ. ರಾಘವೇಂದ್ರ ಎಂ.ನಾಯಕ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಾರಿಗೋಲ್ಡ್‌ ಅಂದಾಕ್ಷಣ, ಅದೊಂದು ಅಂಡರ್‌ವರ್ಲ್ಡ್ ಸಿನಿಮಾ ಇರಬಹುದಾ ಎಂಬ ಪ್ರಶ್ನೆ ಎದುರಾಗುತ್ತದೆ. ಆದರೆ, ಈ ಕುತೂಹಲಕ್ಕೆ ತೆರೆಮೇಲೆಯೇ ಉತ್ತರ ಸಿಗಲಿದೆ.

Advertisement

ಆರ್‌ .ವಿ.ಕ್ರಿಯೇಷನ್ಸ್‌ ಮೂಲಕ ರಘುವರ್ಧನ್‌ ಫಿಲಂಸ್‌ ಬ್ಯಾನರ್‌ನಲ್ಲಿ ರಘುವರ್ಧನ್‌ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಘುವರ್ಧನ್‌ ಅವರು ಮೂಲತಃ ನಿರ್ದೇಶಕರಾಗಿದ್ದು, ಈ ಹಿಂದೆ ತಿಮ್ಮರಾಯ, ಬದ್ರಿ, ಗುಣವಂತ, ಮಿಸ್ಟರ್‌ ಎಲ್‌.ಎಲ್‌.ಬಿ. ಮೊದಲಾದ ಚಿತ್ರಗಳನ್ನು ರಘುವರ್ಧನ್‌ ನಿರ್ದೇಶಿಸಿದ್ದಾರೆ.

ಈ ಚಿತ್ರಕ್ಕೆ ವೀರ್‌ ಸಮರ್ಥ್ ಅವರ ಸಂಗೀತವಿದ್ದು, ಯೋಗರಾಜ್‌ ಭಟ್, ಕವಿರಾಜ್‌ ಮತ್ತು ವಿಜಯ್‌ ಭರಮಸಾಗರ ಅವರು ಸಾಹಿತ್ಯ ಬರೆದಿದ್ದಾರೆ. ಕೆ.ಎಸ್‌. ಚಂದ್ರಶೇಖರ್‌ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನವಿದೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಅರ್ಜುನ್‌ ರಾಜ್‌ ಸಾಹಸ, ಕಲೈ ಅವರ ನೃತ್ಯ ನಿರ್ದೇಶನವಿದೆ.

ಬೆಂಗಳೂರು, ಸಕಲೇಶಪುರದ ಸುತ್ತಮುತ್ತಲ ತಾಣಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿಯಾಗಿದ್ದಾರೆ. ಉಳಿದಂತೆ ಸಂಪತ್‌ಕುಮಾರ್‌, ಕಾಕ್ರೋಚ್‌ ಸುಧಿ, ಯಶ್‌ ಶೆಟ್ಟಿ, ವಜ್ರಾಂಗ್‌ ಶೆಟ್ಟಿ, ಬಲರಾಜ್ವಾಡಿ ಸೇàರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next