Advertisement

ಕಮಲಹಾಸನ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

09:56 AM May 15, 2019 | Team Udayavani |

ಹೊಸದಿಲ್ಲಿ: ಹಿಂದು ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ನಟ ಕಮಲ ಹಾಸನ್‌ ವಿರುದ್ಧ ದೆಹಲಿಯ ಪಟಿಯಾಲಾ ಹೌಸ್‌ ಕೋರ್ಟ್‌ನಲ್ಲಿ ಕ್ರಿಮಿನಲ್‌ ಪ್ರಕರಣವನ್ನು ದಾಖಲಿಸಲಾಗಿದೆ.

Advertisement

ಮಕ್ಕಳ್‌ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕರಾಗಿರುವ ಕಮಲ ಹಾಸನ್‌ ಅರಾವಾಕುರಿಚಿ ವಿಭಾಸಭಾ ಕ್ಷೇತ್ರದ ಉಪಚುನಾವಣಾ  ಪ್ರಚಾರದ ವೇಳೆ ‘ಸ್ವತಂತ್ರ ಭಾರತದ ಮೊದಲ ಹಿಂದು ಉಗ್ರ ನಾಥುರಾಮ್‌ ಗೋಡ್ಸೆ’ ಎಂದು ಹೇಳಿಕೆ ನೀಡಿದ್ದರು.

ಕಮಲ ಹಾಸನ್‌ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹಿಂದುಗಳ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಸಹಿತ ವಿವಿಧ ಸಂಘಟನೆಗಳು ಆಗ್ರಹಿಸಿದ್ದವು.

ಮಂಗಳವಾರ ಕಮಲಹಾಸನ್‌ ಅವರ ಚೆನ್ನೈ ನಿವಾಸದ ಭದ್ರತೆಯನ್ನು ಇನ್ನಷ್ಟು ಬಿಗಿ ಗೊಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next