Advertisement

ಅಂಬಿ ವಿರುದ್ಧ ಕೈ ಕಾರ್ಯಕರ್ತರ ಆಕ್ರೋಶ, ಹೆಬ್ಬಾಳದಲ್ಲಿ ಹೊಯ್ “ಕೈ”

06:23 PM Oct 23, 2017 | Team Udayavani |

ಮಂಡ್ಯ/ಬೆಂಗಳೂರು: ಮನೆ, ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಸಂದರ್ಭದಲ್ಲಿ ನಟ, ಮಾಜಿ ಸಚಿವ, ಶಾಸಕ ಅಂಬರೀಶ್ ವಿರುದ್ಧವೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ಮತ್ತೊಂದೆಡೆ ಬೆಂಗಳೂರಿನ ಹೆಬ್ಬಾಳದಲ್ಲಿ ಮೊಹಲ್ಲಾ ಕ್ಲಿನಿಕ್ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್,ಸಚಿವ ರಮೇಶ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಕೈಕೈ ಮಿಲಾಯಿಸಿದ ಘಟನೆ ಸೋಮವಾರ ನಡೆದಿದೆ.

Advertisement

ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಮನೆ, ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ವೇಳೆ ಅಂಬರೀಶ್ ಅವರು ಒಂದೇ ಒಂದು ಮನೆಗೆ ಭೇಟಿ ನೀಡಿದ್ದರಿಂದ ಸಿಟ್ಟಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಅಂಬರೀಶ್ ವಿರುದ್ಧವೇ ಘೋಷಣೆ ಕೂಗಿದ್ದರು.

ನಾವು ಪಕ್ಷಕ್ಕಾಗಿ ದುಡಿದಿದ್ದೇವೆ, ಎಲ್ಲರ ಮನೆಗೂ ಭೇಟಿ ನೀಡಲಿ ಎಂದು ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದರು. ಈ ವೇಳೆ ಅಂಬರೀಶ್ ಅವರು ಒಂದೇ ಒಂದು ಮನೆಗೆ ಭೇಟಿ ನೀಡಿ ವಾಪಸ್ ತೆರಳಿದ್ದರು. 

ರಮೇಶ್ ಕುಮಾರ್ ವಿರುದ್ಧ ಗರಂ:
ಹೆಬ್ಬಾಳದಲ್ಲಿ ನಡೆದ ಮೊಹಲ್ಲಾ ಕ್ಲಿನಿಕ್ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರ ಬಳಸಿಲ್ಲ ಯಾಕೆ ಎಂದು ಸಚಿವರಾದ ಅನಂತ್ ಕುಮಾರ್, ರಮೇಶ್ ಕುಮಾರ್ ಎದುರೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಚಿವ ರಮೇಶ್ ಕುಮಾರ್ ವಿರುದ್ಧವೇ ಘೋಷಣೆ ಕೂಗಿದರು. ಆದರೆ ಇಬ್ಬರೂ ಸಚಿವರು ಯಾವುದೇ ಸಮಜಾಯಿಷಿ ನೀಡಲು ಹೋಗಿಲ್ಲ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next