Advertisement

ಹೊಸ ಲೋಕಾಯುಕ್ತ ನೇಮಕ ಬೆನ್ನಲ್ಲೇ ಬಿಜೆಪಿಗೆ ಶುರುವಾಯ್ತು ಟೀಕೆ

10:09 AM Jun 15, 2022 | Team Udayavani |

ಬೆಂಗಳೂರು: ನೂತನ ಲೋಕಾಯುಕ್ತರ ನೇಮಕ ಬೆನ್ನಲ್ಲೇ ಬಿಜೆಪಿಗೆ ಈಗ ಭಾರಿ ಟೀಕೆ ಎದುರಾಗಿದ್ದು, ಲೋಕಾಯುಕ್ತಕ್ಕೆ ಪೂರ್ಣ ಅಧಿಕಾರ ನೀಡುವುದು ಯಾವಾಗ? ಎಂಬ ಪ್ರಶ್ನೆ ಎದುರಾಗಿದೆ.

Advertisement

ನಾವು ಅಧಿಕಾರಕ್ಕೆ ಬಂದ ಮೊದಲ ಸಂಪುಟ ಸಭೆಯಲ್ಲೇ ಲೋಕಾಯುಕ್ತಕ್ಕೆ ಹಳೆಯ ಅಧಿಕಾರ ನೀಡಿ, ಸಂಸ್ಥೆಯನ್ನು ಬಲಪಡಿಸಲಾಗುವುದು ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಆಶ್ವಾಸನೆ ನೀಡಿತ್ತು. ಆದರೆ ಮೂರು ವರ್ಷವಾಗುತ್ತಾ ಬಂದರೂ ಲೋಕಾಯುಕ್ತಕ್ಕೆ ಅಧಿಕಾರ ನೀಡುವ ವಿಚಾರ ಮಾತ್ರ ಈಡೇರಿಲ್ಲ ಎಂದು ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ:ಪ್ರತೀಕಾರ-ಬ್ಯಾಂಕ್ ಮ್ಯಾನೇಜರ್ ಹತ್ಯೆಗೈದ ಉಗ್ರ ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಸಾವು

ಬಿಜೆಪಿ ಪ್ರಣಾಳಿಕೆಯಲ್ಲಿ ಕೊಟ್ಟ ಈ ಭಾಷೆಗೂ ವಾಸ್ತವಕ್ಕೂ ಸಂಬಂಧವೇ ಇಲ್ಲ. ನಿಮ್ಮ ಭ್ರಷ್ಟಾಚಾರ ಬೆಳಕಿಗೆ ಬರುತ್ತದೆ ಎಂಬ ಕಾರಣಕ್ಕೆ ಲೋಕಾಯುಕ್ತವನ್ನು ಬಲಪಡಿಸುತ್ತಿಲ್ಲವೇ ? ಎಂಬ ಪ್ರಶ್ನೆ ಎದುರಾಗಿದೆ. ಕುತೂಹಲಕಾರಿ ಸಂಗತಿ ಎಂದರೆ ಈ ಬಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕೂಡಾ ಮಾತನಾಡುತ್ತಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಲೋಕಾಯುಕ್ತಕ್ಕೆ ಇದ್ದ ಪೊಲೀಸಿಂಗ್ ಅಧಿಕಾರಕ್ಕೆ ಕತ್ತರಿ ಹಾಕಿ‌ ಎಸಿಬಿ ಸ್ಥಾಪನೆ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next