Advertisement

ಬಾವಿಯಲ್ಲಿ ಆಶ್ರಯ ಪಡೆದಿದ್ದ ಬರೋಬ್ಬರಿ 750 ಕೆಜಿ ತೂಕದ ಮೊಸಳೆ ಸೆರೆ

10:12 AM Sep 27, 2020 | keerthan |

ಮೈಸೂರು: ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಸುರಕ್ಷಿತ ಜಾಗಕ್ಕೆ ಬಿಟ್ಟ ಘಟನೆ ಮೈಸೂರು ಜಿಲ್ಲೆಯ ಸಿ ಬಿ ಹುಂಡಿ ಗ್ರಾಮದಲ್ಲಿ ನಡೆದಿದೆ.

Advertisement

ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಸಿ ಬಿ ಹುಂಡಿ ಗ್ರಾಮದ ಜಮೀನಿನ‌ ಬಾವಿಯಲ್ಲಿ ಈ ಮೊಸಳೆ ಸೇರಿಕೊಂಡಿತ್ತು. 15 ರಿಂದ 20 ಅಡಿ ಆಳದ ಬಾವಿಯಲ್ಲಿ ಮೊಸಳೆ ಸೇರಿಕೊಂಡಿತ್ತು. ಈ ಮೊಸಳೆ ಬರೋಬ್ಬರಿ 750 ಕೆಜಿ ತೂಕದ ಹೊಂದಿತ್ತು.

ಸುಮಾರು 15ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೊಸಳೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

ಸೆರೆ ಹಿಡದ ಮೊಸಳೆಯನ್ನು ರಂಗನತಿಟ್ಟು ಪಕ್ಷಿಧಾಮದ ಕಾವೇರಿ‌ ನದಿಗೆ ಬಿಡಲು ತೀರ್ಮಾನ ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next