Advertisement

ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದ ಮೊಸಳೆ ಸೆರೆ

04:01 PM Apr 07, 2021 | Team Udayavani |

ಮುಧೋಳ: ಸಮೀಪದ ಬುದ್ನಿ ಬಿ.ಕೆ. ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದ ಮೊಸಳೆಯನ್ನು ಸೆರೆಹಿಡಿದಿರುವ ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಕೃಷ್ಣಾ ನದಿಯಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Advertisement

ಬುದ್ನಿ ಬಿ.ಕೆ. ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಅವಿತಿದ್ದ ಮೊಸಳೆಯನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಮೊಸಳೆಯನ್ನು ಸೆರೆಹಿಡಿದು ಬೀಳಗಿ ಸಮೀಪದ ಕೊರ್ತಿ ಕೊಲ್ಹಾರ ಸಮೀಪದ ಕೃಷ್ಣಾ ನದಿಗೆ ಬಿಟ್ಟಿದ್ದಾರೆ.

ಅಂದಾಜು 6 ಅಡಿ ಉದ್ದದ ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ನೆರವಾಗಿದ್ದಾರೆ.

ಮುಧೋಳ ವಲಯ ಅರಣ್ಯಾಧಿಕಾರಿ ಲಿಂಗಾರೆಡ್ಡಿ‌ ಮಂಕಣಿ ಹಾಗೂ ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಅಲದಿ ಅವರ ಮಾರ್ಗದರ್ಶನದಲ್ಲಿ ಅರಣ್ಯ ರಕ್ಷಕಿ ಸರಸ್ವತಿ‌ ಮಜ್ಜಗಿ ಹಾಗೂ ಸಿಬ್ಬಂದಿ ಮೊಸಳೆ ಹಿಡಿಯುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next