Advertisement

ಬೆಳ್ತಂಗಡಿ: ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ ರಕ್ಷಣೆ

04:01 PM Dec 05, 2021 | Team Udayavani |

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕುದೂರು ಸಮೀಪ ರಬ್ಬರ್ ತೋಟವೊಂದರಲ್ಲಿ ಇಂದು ಬೆಳಗ್ಗೆ 11 ರ ಸುಮಾರಿಗೆ ಪ್ರತ್ಯಕ್ಷವಾಗಿದ್ದ ಮೊಸಳೆಯೊಂದನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

Advertisement

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಕುದೂರು ನಿವಾಸಿ ಸದಾಶಿವ ಎಂಬುವವರ ರಬ್ಬರ್ ತೋಟ ಸಮೀಪದ ತೋಡಿನಲ್ಲಿ ಸುಮಾರು 6 ಅಡಿ ಉದ್ದದ ಮೊಸಳೆಯನ್ನು ತೋಟದ ಕೆಲಸಗಾರರು ಕಂಡಿದ್ದರು.

ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು, ಸ್ಥಳೀಯರು ಹಾಗೂ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಬಲೆಯ ಮುಖಾಂತರ ಹಿಡಿದು ಸಂರಕ್ಷಿಸಿದ್ದಾರೆ. ಗಾಯವಾಗಿದ್ದಲ್ಲಿ ಚಿಕಿತ್ಸೆ ನೀಡಿ ಪಿಲಿಕುಳಕ್ಕೆ ಇಲ್ಲವಾದಲ್ಲಿ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುವ ಕುರಿತು ಅರಣ್ಯಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಅರಣ್ಯಧಿಕಾರಿಗಳಾದ ರವೀಂದ್ರ ಅಂಕಲಗಿ, ಹರಿಪ್ರಸಾದ್, ಭವಾನಿಶಂಕರ್, ರಾಘವೇಂದ್ರ, ಪಾಂಡುರಂಗ ಕಮತಿ, ವಾಸು, ಸ್ಥಳೀಯರಾದ ರಮೇಶ್, ರಾಜೇಶ್, ಗಣೇಶ್, ಗುರುಪ್ರಸಾದ್ ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next