Advertisement
ರಾಜ್ಯ ಸರಕಾರ ಎಲ್ಲ ಜಿಲ್ಲೆಗಳ ಬಹುತೇಕ ಹಳ್ಳಿಗಳಲ್ಲಿ ಮುಂಗಾರು ಪೂರ್ವ ಬೆಳೆ ಸಮೀಕ್ಷೆ ನಡೆಸಲು ನಿರ್ಧರಿಸಿತ್ತು. ಗ್ರಾಮ ಲೆಕ್ಕಿಗರ ಜತೆ ಸಮೀಕ್ಷೆ ವೇಳೆ ಸ್ಥಳೀಯ ನಿರುದ್ಯೋಗಿ ಯುವಕರನ್ನು ಬಳಸಿಕೊಂಡಿತ್ತು. ಈ ಯುವಕರಿಗೆ ತರಬೇತಿ ಕೂಡ ನೀಡಲಾಗಿತ್ತು.
ಸಂಭಾವನೆ ಸಿಗದ ಕುರಿತು ಜ. 16ರ “ಉದಯವಾಣಿ’ಯಲ್ಲಿ ವಿಸ್ತೃತ ವರದಿ ಪ್ರಕಟಿಸಿ ಸರಕಾರ ಮತ್ತು ಅಧಿಕಾರಿಗಳ ಗಮನ ಸೆಳೆದಿತ್ತು. ಈಗ ಸರಕಾರ ಸಂಭಾವನೆ ನೀಡಲು ಒಪ್ಪಿದೆ. ಆದರೆ ಪೂರ್ಣ ಪ್ರಮಾಣಕ್ಕೆ ಬದಲಾಗಿ ಶೇ. 70ರಷ್ಟು ಮಾತ್ರ ಆರಂಭದಲ್ಲಿ ನೀಡಲಾಗುತ್ತಿದೆ. ಮುಂಗಾರು ಬೆಳೆ ಸಮೀಕ್ಷೆ ಮುಗಿದಿದ್ದರೂ ಕೆಲವು ಭಾಗಗಳಲ್ಲಿ ಪರಿಪೂರ್ಣವಾಗಿಲ್ಲ, ಈ ಕಾರಣಕ್ಕೆ ಸಮೀಕ್ಷೆ ಪೂರ್ಣವಾದ ಬಳಿಕ ಪೂರ್ತಿ ಸಂಭಾವನೆಯನ್ನು ನೀಡಲಾಗುವುದು. ಅಲ್ಲಿಯ ತನಕ ಶೇ. 30ರಷ್ಟು ಸಂಭಾವನೆಯನ್ನು ತಡೆಹಿಡಿಯಲಾಗುತ್ತದೆ ಎಂದು ಕಂದಾಯ ಇಲಾಖೆ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
Related Articles
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಮೀಕ್ಷಕ ಯುವಕರು, ನಮಗೆ ವಹಿಸಿದ ಕಾರ್ಯವನ್ನು ಪೂರ್ಣಗೊಳಿಸಿ ಕೊಟ್ಟಿದ್ದೇವೆ. ಬಿಸಿಲಿಗೆ ಓಡಾಡಿಸಿ ದಿನಕ್ಕೆ ಇಂತಿಷ್ಟು ಮನೆಗಳ ಸಮೀಕ್ಷೆ ಮಾಡಬೇಕು ಎಂದು ಒತ್ತಡ ಹೇರುತ್ತಿದ್ದ ಕಂದಾಯ ಅಧಿಕಾರಿಗಳು ಸಂಭಾವನೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ವಿಳಂಬಕ್ಕೆ ಸಬೂಬು ಹುಡುಕುತ್ತಿದ್ದಾರೆ. ಇದು ಸರಿಯಲ್ಲ. ಈ ತಾರತಮ್ಯದಿಂದ ಬೇಸರ ಆಗಿದೆ ಎಂದು ಅಳಲು ವ್ಯಕ್ತಪಡಿಸಿದ್ದಾರೆ.
Advertisement
ವಾರದೊಳಗೆ ಹಣ ಖಾತೆಗೆಸರಕಾರ ಹಣ ಬಿಡುಗಡೆ ಗೊಳಿಸಿದೆ. ಸಮೀಕ್ಷೆಯಲ್ಲಿ ಭಾಗವಹಿಸಿದ ಯುವಕರ ಖಾತೆಗಳಿಗೆ ವಾರದೊಳಗೆ ಸಂಭಾವನೆ ಹಣ ಪಾವತಿಯಾಗಲಿದೆ.
– ಸಂತೋಷ್ ಕುಮಾರ್, ತಹಶೀಲ್ದಾರ್, ಸುಳ್ಯ