Advertisement

ಭಟ್ಕಳ: ಕೋಟ್ಯಂತರ ರೂ. ಅವ್ಯವಹಾರ ಮಾಡಿ ಪರಾರಿಯಾದ ಮಂಗಳೂರು ಮೂಲದ ಬ್ಯಾಂಕ್ ಶಾಖಾಧಿಕಾರಿ

04:46 PM Apr 23, 2022 | Team Udayavani |

ಭಟ್ಕಳ: ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನ ನ್ಯೂ ಇಂಗ್ಲೀಷ್ ರಸ್ತೆಯ ಶಾಖೆಯಲ್ಲಿ ಸುಮಾರು 1.50 ಕೋಟಿಗೂ ಮಿಕ್ಕಿ ಅವ್ಯವಹಾರವಾಗಿದ್ದು ಶಾಖೆಯ ವ್ಯವಸ್ಥಾಪಕರನ್ನು ಅಮಾನತುಗೊಳಿಸಿ ಬ್ಯಾಂಕಿನ ಪ್ರಧಾನ ಕಚೇರಿಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Advertisement

ಕಳೆದ 2 ವರ್ಷಗಳಿಂದ ಇಲ್ಲಿ ಶಾಖಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಮೂಲತಃ ಮಂಗಳೂರಿನವರಾದ ಶಾಖಾಧಿಕಾರಿ ಅನೂಪ್ ಪೈ ಅವರು ಅವ್ಯವಹಾರ ನಡೆಸುತ್ತಿದ್ದಾರೆನ್ನಲಾಗಿದ್ದು, ಮಾರ್ಚ್ ಅಂತ್ಯಕ್ಕೆ ಬ್ಯಾಂಕಿನ ಅಡಿಟ್ ಮಾಡುವ ಸಂದರ್ಭದಲ್ಲಿ ಅಡಿಟರ್ ಈ ಅವ್ಯವಹಾರವನ್ನು ಬಯಲಿಗೆಳೆದಿದ್ದರು.

ಬ್ಯಾಂಕಿನಲ್ಲಿ ತುರ್ತು ಸಂದರ್ಭಕ್ಕೆಂದು ಇಡಲಾಗಿದ್ದ ಸಿಸ್ಟಮ್ ಅಕೌಂಟ್ ನಿಂದ ಹಣ ಡ್ರಾ ಮಾಡುತ್ತಿದ್ದ ಇವರು ಸುಮಾರು ಒಂದೂವರೆ ಕೋಟಿ ರೂಪಾಯಿಗಳಷ್ಟು ಅವ್ಯವಹಾರ ನಡೆಸಿದ್ದಾರೆನ್ನಲಾಗಿದೆ.

ಆಡಿಟ್ ವರದಿಯಲ್ಲಿ ವಿಷಯ ತಿಳಿಯುತ್ತಿದ್ದಂತೆಯೇ ಶಾಖಾಧಿಕಾರಿಯನ್ನು ಅಮಾನತು ಮಾಡಿದ್ದು, ನಂತರ ಶಾಖಾಧಿಕಾರಿಯಾಗಿ ಬಂದಿದ್ದ ರಾಘವೇಂದ್ರ ಅವರು ಅವ್ಯವಹಾರದ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರು ದಾಖಲಿಸಿರುವುದು ತಿಳಿಯುತ್ತಿದ್ದಂತೆಯೇ ಅನೂಪ ಪೈ ಅವರು ನಾಪತ್ತೆಯಾಗಿದ್ದು ಪೊಲೀಸರು ಅವರು ಉಳಿದುಕೊಂಡಿದ್ದ ಬಾಡಿಗೆ ಮನೆಗೆ ಹೋದಾಗ ಬೀಗ ಹಾಕಿತ್ತು ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next