Advertisement

ಆಶ್ಲೇಷ‌ ನಕ್ಷತ್ರ ಹಿನ್ನಲೆ ಕುಕ್ಕೆಯಲ್ಲಿ ಭಕ್ತರ ದಂಡು: ರವಿವಾರ ರಾತ್ರಿಯಿಂದಲೇ ಸರತಿ ಸಾಲು

11:38 AM Oct 12, 2020 | keerthan |

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಕುಕ್ಕೆ‌ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೆಲ ದಿನಗಳಿಂದ ಹೆಚ್ಚಿನ ಭಕ್ತರು ಭೇಟಿ ನೀಡುತ್ತಿದ್ದು, ಸೋಮವಾರ (ಅ.12) ಆಶ್ಲೇಷ ನಕ್ಷತ್ರ ವಿಶೇಷ ದಿನವಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಸೋಮವಾರದ  ವಿಶೇಷ ಸೇವೆ ನೆರವೇರಿಸಲು ಭಕ್ತರು ರವಿವಾರ ರಾತ್ರಿಯೇ ಸರತಿ ಸಾಲಿನಲ್ಲಿ ನಿಂತ ದೃಶ್ಯ‌‌ ಕಂಡುಬಂತು.

Advertisement

ಸೋಮವಾರ ಬೆಳಿಗ್ಗೆ ಕ್ಷೇತ್ರದಲ್ಲಿ ಹೆಚ್ಚಿನ ಭಕ್ತಸಾಗರ ಕಂಡುಬಂದಿದೆ. ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರವಿವಾರ ರಾತ್ರಿಯೇ ದೇವಲದ ಕಛೇರಿ ಬಳಿ ಸರತಿ‌ ಸಾಲಿನಲ್ಲಿ ನಿಂತಿದ್ದರು.

ಇದನ್ನೂ ಓದಿ:ಹಳ್ಳಿ ಜನರಿಗೆ ಸ್ವಾಮಿತ್ವ ಬಲ ! ಡಿಜಿಟಲ್‌ ಆಸ್ತಿ ಮಾಲಕತ್ವ ದಾಖಲೆ ಹಸ್ತಾಂತರಕ್ಕೆ ಚಾಲನೆ

ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ‌ ಸಾಲಿನಲ್ಲಿ ನಿಂತಿದ್ದಾರೆ ಎನ್ನಲಾಗಿದೆ. ಸೋಮವಾರ ಬೆಳಿಗ್ಗೆಯೂ ದೇವಳಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next