Advertisement

ದಕ್ಷಿಣ ಕನ್ನಡದ ಸೂಕ್ಷ್ಮ ಪ್ರದೇಶಗಳಲ್ಲಿ CRPF, ಪೊಲೀಸರ Flag march

10:23 PM Apr 07, 2023 | Team Udayavani |

ಮಂಗಳೂರು: ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಲು ಮೊದಲ ಹಂತದಲ್ಲಿ 4 CRPF ತುಕಡಿಗಳು ಆಗಮಿಸಿದ್ದು,ಶುಕ್ರವಾರ ಸಂಜೆ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಮುಖ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಪಥ ಸಂಚಲನ ನಡೆಸಿದವು.

Advertisement

ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ CRPF ತುಕಡಿ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ ನಡೆಸಲಾಯಿತು.

ಸುಳ್ಯ ಪೊಲೀಸ್ ಠಾಣೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ,ಬೆಳ್ತಂಗಡಿ ಪೊಲೀಸ್ ಠಾಣೆ, ಬಂಟ್ವಾಳ ಟೌನ್, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಗಳ ವ್ಯಾಪ್ತಿಯಲ್ಲಿನ ಸೂಕ್ಷ್ಮ ಹಾಗೂ ಪ್ರಮುಖ ಸ್ಥಳಗಳಲ್ಲಿ ಒಂದೊಂದು CRPF ಕಂಪನಿ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ ಮಾಡಿ ಸಾರ್ವಜನಿಕ ರಲ್ಲಿ ಶಾಂತಿಯುತ ಚುನಾವಣೆ ನಡೆಯುವ ಕುರಿತು ಆತ್ಮ ವಿಶ್ವಾಸ ಮೂಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next