Advertisement

ಆತ್ಮಹತ್ಯಾ ದಾಳಿ ಮೂಲಕ ಅಮಿತ್ ಶಾ, ಯೋಗಿ ಹತ್ಯೆ ಮಾಡ್ತೇವೆ: CRPF ಗೆ ಬೆದರಿಕೆಯ ಇ ಮೇಲ್

01:27 PM Apr 06, 2021 | Team Udayavani |

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆಗೈಯುವುದಾಗಿ ಬೆದರಿಕೆ ಒಡ್ಡಿರುವ ಇ-ಮೇಲ್ ಬಂದಿರುವುದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ಮಂಗಳವಾರ(ಏ.6) ತಿಳಿಸಿದೆ.

Advertisement

ಇದನ್ನೂ ಓದಿ:ಉಡುಪಿ: ಮನೆ ಮುಂಭಾಗ ನಿಲ್ಲಿಸಿರುವ ವಾಹನಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಮಾಧ್ಯಮಗಳ ವರದಿ ಪ್ರಕಾರ, ಕೆಲವು ದಿನಗಳ ಹಿಂದೆ ಮುಂಬೈನಲ್ಲಿರುವ ಸಿಆರ್ ಪಿಎಫ್ ಕೇಂದ್ರ ಕಚೇರಿಗೆ ಬೆದರಿಕೆ ಒಡ್ಡಿರುವ ಇ-ಮೇಲ್ ಬಂದಿರುವುದಾಗಿ ಹೇಳಿದೆ. ಪ್ರಮುಖ ಧಾರ್ಮಿಕ ಸ್ಥಳ ಹಾಗೂ ಮುಖ್ಯವಾದ ಘಟಕಗಳ ಮೇಲೂ ದಾಳಿ ನಡೆಸುವುದಾಗಿ ಇ-ಮೇಲ್ ನಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆತ್ಮಹತ್ಯೆ ದಾಳಿಯಿಂದ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ನಿರ್ಮೂಲ ಮಾಡುವುದಾಗಿ ಇ-ಮೇಲ್ ನಲ್ಲಿ ಬೆದರಿಸಲಾಗಿದೆ. ಯೋಗಿ ಹಾಗೂ ಶಾ ಅವರನ್ನು ಹತ್ಯೆಗೈಯಲು 11 ಮಂದಿ ಆತ್ಮಹತ್ಯಾ ಬಾಂಬರ್ಸ್ ಇದ್ದಿರುವುದಾಗಿ ಇ-ಮೇಲ್ ನಲ್ಲಿ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.

ಗೃಹ ಸಚಿವ ಅಮಿತ್ ಶಾ ಮತ್ತು ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆಗೈಯುವ ಬೆದರಿಕೆ ಒಡ್ಡಿರುವ ಇ-ಮೇಲ್ ಮೂಲದ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಈ ಬಗ್ಗೆ ಶೀಘ್ರವೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next