Advertisement

ಪ್ರಧಾನಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ: ಸಿಎಂಗಳು ಭಾಗಿ

11:11 AM Jun 17, 2018 | |

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗದ ಮಹತ್ವದ ಸಭೆ ಆರಂಭವಾಗಿದೆ. ಸಭೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು  ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿ ಸರ್ಕಾರದ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. 

Advertisement

ರೈತರ ಸಮಸ್ಯೆಗಳು, ರೈತರ ಆಧಾಯ ಹೆಚ್ಚಳ ಮಾಡುವ ಕುರಿತು, ಆಯುಷ್ಮಾನ್‌ ಭಾರತ್‌ , ವಿವಿಧ ಅಭಿವೃದ್ಧಿ ಕಾರ್ಯಗಳು ಮತ್ತು ಮಹಾತ್ಮಾ ಗಾಂಧೀಜಿ ಅವರ 150 ನೇ ಜನ್ಮ ದಿನಾಚರಣೆಯ ಕುರಿತು ಚರ್ಚೆ ನಡೆಯಲಿದೆ. 

ಚಂದ್ರ ಬಾಬು ನಾಯ್ಡು , ಮಮತಾ ಬ್ಯಾನರ್ಜಿ ಅವರು ಸಭೆಯಲ್ಲಿ  ರಾಜ್ಯಗಳಿಗೆ ವಿಶೇಷ ಸ್ಥಾನಮಾನದ ಕುರಿತು ಪ್ರಶ್ನೆಯೆತ್ತುವ ಸಾಧ್ಯತೆಗಳಿವೆ. 

Advertisement

Udayavani is now on Telegram. Click here to join our channel and stay updated with the latest news.

Next