ಧಾರವಾಡ: ಮರಕ್ಕೆ ಕ್ರೂಸರ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಏಳು ಜನರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ಆರು ಜನರು ಗಂಭೀರ ಗಾಯಗೊಂಡಿದ್ದು, ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿಕೊಂಡು ವಾಹನದಲ್ಲಿ ಬರುತ್ತಿತ್ತು ಎನ್ನಲಾಗಿದೆ.
ಅನನ್ಯ (14), ಹರೀಶ (13) ಶಿಲ್ಪಾ (34), ನೀಲವ್ಚ (60), ಮಧುಶ್ರೀ (20), ಮಹೇಶ್ವರಯ್ಯ (11), ಶಂಭುಲಿಂಗಯ್ಯ (35) ಸಾವನ್ನಪ್ಪಿದ ದುರ್ದೈವಿಗಳು.
ಮನಸೂರ ಗ್ರಾಮದಿಂದ ನಿಗದಿ (ಬೆನಕನಕಟ್ಟಿ) ಗೆ ಹೋಗುವಾಗ ಈ ಘಟನೆ ನಡೆದಿದೆ. ಒಟ್ಟು ಏಳು ಜನ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಢಿಕ್ಕಿ ಸಂಭವಿಸಿದೆ.
Related Articles
ಇದನ್ನೂ ಓದಿ:ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ
ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್ಗೆ ದಾಖಲು ಮಾಡಲಾಗಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇನ್ನು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆ ಹಾಕುತಿದ್ದಾರೆ.