Advertisement

ಕ್ರಿಪ್ಟೋಕರೆನ್ಸಿ: ಕಳವಳ ವ್ಯಕ್ತ ಪಡಿಸಿದ ಆರ್‌ಬಿಐ

07:46 PM Nov 10, 2021 | Team Udayavani |

ನವದೆಹಲಿ: ಕ್ರಿಪ್ಟೋಕರೆನ್ಸಿಯಿಂದ ದೇಶದ ಆರ್ಥಿಕತೆಗೆ ಹೊಡೆತ ಬೀಳುವ ಸಾಧ್ಯತೆಯಿದೆ ಎಂದು ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ)ದ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಎಚ್ಚರಿಸಿದ್ದಾರೆ.

Advertisement

ದೇಶದಲ್ಲಿ ಕ್ರಿಪ್ಟೋಕರೆನ್ಸಿ ಮೇಲೆ ಹೂಡಿಕೆ ಮಾಡುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಬೆನ್ನಲ್ಲೇ ಈ ಎಚ್ಚರಿಕೆ ಬಂದಿದೆ.

ಕ್ರಿಪ್ಟೋಕರೆನ್ಸಿಯು ಸ್ಥೂಲ ಆರ್ಥಿಕತೆ ಮತ್ತು ಆರ್ಥಿಕ ಸ್ಥಿರತೆಯ ದೃಷ್ಟಿಕೋನದಿಂದ ಗಂಭೀರ ಕಾಳಜಿಯ ವಿಷಯವಾಗಿದೆ. ಅದರ ಮೇಲೆ ಹೂಡಿಕೆ ಮಾಡುವವರ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ.

ಇದನ್ನೂ ಓದಿ:ಹೋಟೆಲ್ ರುವಾಂಡ : ಹಿಂಸೆಯ ಗಾಢತೆಯಲ್ಲೇ ಮಾನವೀಯತೆಯ ಬಣ್ಣ ಪ್ರದರ್ಶಿಸುವ ಸಿನಿಮಾ

ಅದಕ್ಕಾಗಿ ಹೂಡಿಕೆದಾರರ ಸಂಖ್ಯೆಯಲ್ಲೂ ಸುಳ್ಳು ವರದಿ ನೀಡಲಾಗುತ್ತಿದೆ. ಇದರ ವಿರುದ್ಧ ಕ್ರಮಕ್ಕಾಗಿ ನಾವು ಕೇಂದ್ರಕ್ಕೆ ಕೆಲವು ಸಲಹೆ ನೀಡಿದ್ದೇವೆ ಎಂದು ಶಕ್ತಿಕಾಂತ್‌ ಅವರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next