Advertisement

ಸಿಎಸ್‌ ರತ್ನಪ್ರಭಾ ಸೇವಾವಧಿ ಮೂರು ತಿಂಗಳು ವಿಸ್ತರಣೆ

07:00 AM Mar 30, 2018 | |

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾವ ಅವರ ಸೇವಾವಧಿಯನ್ನು ಏ. 1ರಿಂದ ಮೂರು ತಿಂಗಳು ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Advertisement

ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಮಾ. 31ರಂದು ಸೇವೆಯಿಂದ ನಿವೃತ್ತರಾಗಬೇಕಿತ್ತು. ಆದರೆ, ಇದೀಗ ಸೇವಾವಧಿಯನ್ನು ಏ. 1ರಿಂದ ಮೂರು ತಿಂಗಳು ವಿಸ್ತರಿಸಿರುವುದರಿಂದ ಜೂನ್‌ ಅಂತ್ಯದವರೆಗೆ ಅವರು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ರತ್ನಪ್ರಭಾ ಅವರು ಕಳೆದ ನವೆಂಬರ್‌ ಅಂತ್ಯದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದು, ಮಾ. 31ರಂದು ಸೇವೆಯಿಂದ ನಿವೃತ್ತರಾಗಬೇಕಿತ್ತು. ಆದರೆ, ಅವರ ಸೇವೆಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ. 20ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಅವರ ಸೇವಾವಧಿಯನ್ನು ಜೂನ್‌ ಅಂತ್ಯದವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next