Advertisement

ಚುನಾವಣಾ ಸಹ ಪ್ರಭಾರಿಯಾಗಿ ಸಿ.ಟಿ.ರವಿ ನೇಮಕ

06:49 AM Jan 06, 2019 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿದ್ಧತೆಯನ್ನು ಚುರುಕುಗೊಳಿಸಿರುವ ಬಿಜೆಪಿಯು ಕರ್ನಾಟಕಕ್ಕೆ ಬಿಜೆಯ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಅವರನ್ನು ಚುನಾವಣಾ ಪ್ರಭಾರಿ ಹಾಗೂ ಕಿರಣ್‌ ಮಹೇಶ್ವರಿ ಅವರನ್ನು ಸಹ ಪ್ರಭಾರಿಯನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಶನಿವಾರ ಆದೇಶ ಹೊರಡಿಸಿದ್ದಾರೆ.

Advertisement

ಹಾಗೆಯೇ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ತಮಿಳುನಾಡು ಹಾಗೂ ಕೇಂದ್ರಾಳಿದ ಪ್ರದೇಶಗಳಾದ ಪುದುಚೆರಿ, ಅಂಡಮಾನ್‌ ಮತ್ತು ನಿಕೋಬಾರ್‌ಗೆ ಸಹ‌ ಪ್ರಭಾರಿಯನ್ನಾಗಿ ನೇಮಕ ಮಾಡಿದ್ದಾರೆ.

ಅಮಿತ್‌ ಶಾ ಟ್ವೀಟ್‌ ಕಿಡಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಟ್ವೀಟ್‌ ಮೂಲಕ ಕಿಡಿ ಕಾರಿದ್ದಾರೆ. “ಪ್ರಸ್ತುತ ರಾಜ್ಯ ಸರ್ಕಾರದ ಆಡಳಿತದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ದಲಿತರು ಗುಲಾಮರಾಗಿ ಬದುಕುತ್ತಿದ್ದಾರೆ. ಸಾಮಾನ್ಯ ಜನ ತೆರಿಗೆ ಹೊರೆಯಿಂದ ತತ್ತರಿಸುತ್ತಿದ್ದಾರೆ. ಇಷ್ಟಾದರೂ ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಅದಕ್ಷತೆಗೆ ಕರ್ನಾಟಕ ಜನತೆ ಯಾಕೆ  ಬೆಲೆ ತೆರಬೇಕು’ ಎಂದು ಅಮಿತ್‌ ಶಾ ಅವರು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next