Advertisement

ಸಿ.ಟಿ.ರವಿ ಟ್ವೀಟ್‌ಗೆ ಕೈ ಮುಖಂಡರ ಆಕ್ರೋಶ

08:15 AM Mar 11, 2017 | |

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ವಿದೇಶ ಪ್ರವಾಸದ ಕುರಿತು ಬಿಜೆಪಿ ವಕ್ತಾರ ಸಿ.ಟಿ.ರವಿಯವರ “ಟ್ವೀಟ್‌’ ಕಾಂಗ್ರೆಸ್‌ ವಲಯದಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ. ಸಿಎಂ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್‌, ಆಂಜನೇಯ, ಖಾದರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿಕೆಯನ್ನು ಖಂಡಿಸಿದ್ದಾರೆ. ಸಿ.ಟಿ.ರವಿ ಅವರನ್ನು ನಿಮಾನ್ಸ್‌ಗೆ ಶಿಫ್ಟ್ ಮಾಡಬೇಕು. 2 ಬಾರಿ ಪ್ರಧಾನಿ ಹುದ್ದೆ ತ್ಯಾಗ ಮಾಡಿದ ಮಹಿಳೆಯ ಬಗ್ಗೆ ಈ ರೀತಿಯ ಹೇಳಿಕೆ ನೀಡುವಾಗ ಆಲೋಚನೆ ಮಾಡ
ಬೇಕೆಂದು ಸಚಿವ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Advertisement

ಸಿದ್ದರಾಮಯ್ಯ ಆಕ್ಷೇಪ: ಸಿ.ಟಿ.ರವಿ ಮಾತು ಬೇಜವಾಬ್ದಾರಿತನದಿಂದ ಕೂಡಿದೆ. ಮಾಡಿದ್ದಾರೆ. ಸೋನಿಯಾ ಗಾಂಧಿ ಬಗ್ಗೆ ಹೇಳಿಕೆ ನೀಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

“ಟ್ವೀಟ್‌’ನಲ್ಲೇನಿತ್ತು?
ಪ್ರತಿ ಚುನಾವಣಾ ಫ‌ಲಿತಾಂಶ ಸಂದರ್ಭದಲ್ಲಿ ಸೋನಿಯಾಗಾಂಧಿ ವಿದೇಶಕ್ಕೆ ಹೋಗುತ್ತಾರೆ. ಈ ಬಾರಿಯೂ ಹೋಗಿದ್ದಾರೆ, ಅವರು ಚಿಕಿತ್ಸೆಗೆ ಹೋಗಿದ್ದಾರೋ ಅಥವಾ ಬ್ಯಾಂಕ್‌ ಅಕೌಂಟ್‌ ನಿರ್ವಹಣೆ ಮಾಡಲು ಹೋಗಿದ್ದಾರೋ?. ಸೋನಿಯಾಗಾಂಧಿ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಬಹುದಿತ್ತು, ಹೇಗಿದ್ದರೂ ಸಿದ್ದರಾಮಯ್ಯ ಇಲ್ಲಿ ಆಡಳಿತ ನಡೆಸುತ್ತಿದ್ದು ನೋಡಿಕೊಳ್ಳುತ್ತಿದ್ದರಲ್ಲ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದರು.  

Advertisement

Udayavani is now on Telegram. Click here to join our channel and stay updated with the latest news.

Next