Advertisement

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

11:47 PM Sep 20, 2024 | Team Udayavani |

ಚಿಕ್ಕಮಗಳೂರು: ಶೇ. 80ರಷ್ಟು ಹಿಂದೂಗಳೇ ಇದ್ದರೂ ನೆಮ್ಮದಿಯಿಂದ ಗಣೇಶೋತ್ಸವ ಆಚರಿಸಲಾಗುತ್ತಿಲ್ಲ. ಇಂತಹ ಕೆಟ್ಟ ಪರಿಸ್ಥಿತಿಯನ್ನು ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ತಂದಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದರು.

Advertisement

ಪತ್ರಕರ್ತರ ಜತೆ ಮಾತನಾಡಿ, ಮತಾಂಧರಿಗೆ ಬೆಂಬಲ ಕೊಟ್ಟು ರಾಜಕಾರಣ ಮಾಡುತ್ತಿರುವುದರಿಂದ ಮತಾಂಧರೂ ಕೊಬ್ಬಿದ್ದಾರೆ. ಗಣೇಶೋತ್ಸವದ ಮೇಲೆ ಕಲ್ಲು ತೂರುವುದು, ಪೆಟ್ರೋಲ್‌ ಬಾಂಬ್‌ ಹಾಕಿಸೋದು ಸಿದ್ದರಾಮಯ್ಯ ಸೆಕ್ಯುಲರ್‌ ನೀತಿನಾ? ಕಾಂಗ್ರೆಸ್‌ ಸರಕಾರ ಬಂದಾಗಲೆಲ್ಲ ಮಂತಾಧರೂ ಬಾಲ ಬಿಚ್ಚುತ್ತಾರೆ ಎಂದರು.

ಜಮೀರ್‌ ಅಹಮದ್‌ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದರೆ ತಪ್ಪೇನು ಎಂದು ಕೇಳಿದ್ದಾರೆ. ಇಲ್ಲಿರುವವರಿಗೂ ಪ್ಯಾಲೆಸ್ತೀನ್‌ಗೂ ಏನು ಸಂಬಂಧ? ಏಕೆ ಹಾರಿಸಬೇಕು. ನಿಮಗೆ ಭಾರತದ ಧ್ವಜ ಹಾರಿಸಬೇಕೆಂದರೆ ಕಷ್ಟವಾಗುತ್ತದೆ. ವಂದೇ ಮಾತರಂ ಹೇಳಲು ಷರಿಯಾ ಅಡ್ಡಿಯಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next