Advertisement

‘ಹಾಲಿಂದು ಹಾಲಿಗೆ, ನೀರಿಂದು ನೀರಿಗೆ’: ಡಿಕೆಶಿ ಸಿಬಿಐ ತನಿಖೆಗೆ ಸಿಟಿ ರವಿ ಪ್ರತಿಕ್ರಿಯೆ

12:53 PM Oct 19, 2023 | Team Udayavani |

ಚಿಕ್ಕಮಗಳೂರು: “ಹಾಲಿಂದು ಹಾಲಿಗೆ, ನೀರಿಂದು ನೀರಿಗೆ, ಉಪ್ಪು ತಿಂದವರು ನೀರು ಕುಡಿಯಬೇಕು ಎಂದು ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಿಲ್ ನೀಡಿದ ಹಿನ್ನೆಲೆಯಲ್ಲಿ ಸಿ.ಟಿ.ರವಿ ಪ್ರತಿಕ್ರಿಯಿಸಿದರು.

Advertisement

ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಪ್ರಾಮಾಣಿಕರಿಗೆ ತೊಂದರೆ ಆಗಬಾರದು. ಯಾರೇ ಅಕ್ರಮ ಮಾಡಿದರೆ ಇಂದಲ್ಲ ನಾಳೆ ಬಯಲಿಗೆ ಬರುತ್ತದೆ ಎಂದರು.

ಸತ್ಯವನ್ನು ಹೂತು ಹಾಕಲು ಆಗಲ್ಲ, ಕೆಲಕಾಲ ಮಾತ್ರ ಮುಚ್ಚಿಡಬಹುದು, ಎಂದಾದರೂ ಸತ್ಯ ಹೊರಬರುತ್ತದೆ ಎಂದು ಹೇಳಿದರು.

ಕಾನೂನಿಗಿಂತ ಯಾರು ದೊಡ್ಡವರಲ್ಲ, ಅಂಬೇಡ್ಕರ್ ಅವರು ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದಿದ್ದಾರೆ. ಯಾರು ತಪ್ಪು ಮಾಡಿದರೂ ಶಿಕ್ಷೆ ಆಗಬೇಕು ಎಂದು ಸಿ ಟಿ ರವಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next