Advertisement

ಸಿಟಿಇಟಿ ಮೀಸಲಾತಿ: ನೋಟಿಸ್‌

12:26 AM May 17, 2019 | Team Udayavani |

ಹೊಸದಿಲ್ಲಿ: ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ) ಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10 ಮೀಸಲಾತಿ ನೀತಿಯನ್ನು ಅನುಷ್ಠಾನಗೊಳಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್‌ ಮೊರೆ ಹೋಗಲಾಗಿದ್ದು, ಈಗ ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಹಾಗೂ ಸಿಬಿಎಸ್‌ಇಗೆ ಸುಪ್ರೀಂಕೋರ್ಟ್‌ ಸೂಚಿಸಿದೆ. ಅಲ್ಲದೆ ಜುಲೈ 1ರಂದು ವಿಚಾರಣೆಗೆ ದಿನಾಂಕ ನಿಗದಿಸಿದೆ. ಈ ಕಾನೂನನ್ನು ಸಂಸತ್ತು ಅನು ಮೋದಿ ಸಿರುವ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಎಲ್ಲರಿಗೂ ಎಲ್ಲ ಅವಕಾಶಗಳಲ್ಲೂ ಇದು ಅನ್ವಯವಾಗಬೇಕು. ಈ ಪರೀಕ್ಷೆಯಲ್ಲಿ ಶೇ.10 ಮೀಸಲಾತಿ ನೀಡಿದರೆ, ನಾವು ಪರೀಕ್ಷೆಯಲ್ಲಿ ತೇರ್ಗಡೆಯಾಗುತ್ತೇವೆ ಎಂದು ಆರು ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯಲ್ಲಿ ಆಗ್ರಹಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next