Advertisement

ಧರ್ಮನಿಷ್ಠೆಯ ಕನ್ನಡಕ,ಉಡುಪಿನಿಂದ ಬದಲಾವಣೆ ಸಾಧ್ಯವಿಲ್ಲ: ಪ್ರಧಾನಿಗೆ ಪ್ರಿಯಾಂಕಾ

05:18 PM Dec 16, 2021 | Team Udayavani |

ನವದೆಹಲಿ: ಎಚ್ಚರಿಕೆಯಿಂದ ಸಂಗ್ರಹಿಸಿದ ಧರ್ಮನಿಷ್ಠೆಯ ಕನ್ನಡಕಗಳು ಮತ್ತು ಧಾರ್ಮಿಕ ಉಡುಪುಗಳನ್ನು ಧರಿಸುವುದರಿಂದ “ನೀವು ಅಪರಾಧಿಯನ್ನು ರಕ್ಷಿಸುತ್ತಿರುವಿರಿ” ಎಂಬ ಅಂಶವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ರೋಶ ಹೊರ ಹಾಕಿ ಟ್ವೀಟ್ ಮಾಡಿದ್ದಾರೆ.

Advertisement

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸದಿದ್ದುದಕ್ಕಾಗಿ ಪ್ರಿಯಾಂಕಾ ಈ ಆಕ್ರೋಶ ಹೊರ ಹಾಕಿದ್ದಾರೆ.  ಸರಕಾರದ ನೈತಿಕ ದಿವಾಳಿತನದ ಸ್ಪಷ್ಟ ಸೂಚನೆ ಎಂದು ಟೀಕಿಸಿದ್ದಾರೆ. 

ನಾಲ್ವರು ರೈತರು ಸೇರಿದಂತೆ ಎಂಟು ಜನರ ಸಾವಿಗೆ ಕಾರಣವಾದ ಲಖಿಂಪುರ ಖೇರಿ ಹಿಂಸಾಚಾರವು “ಪೂರ್ವ ಯೋಜಿತ ಪಿತೂರಿ” ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಸ್ಥಳೀಯ ನ್ಯಾಯಾಲಯದಲ್ಲಿ ಹೇಳಿದ ನಂತರ ಅವರು ಸಚಿವರನ್ನು ವಜಾಗೊಳಿಸಬೇಕೆಂಬ ಬೇಡಿಕೆಯನ್ನು ಪುನರುಚ್ಛರಿಸಿದ್ದಾರೆ.

ಲಖಿಂಪುರ ಖೇರಿ ಘಟನೆಗೆ ಸಂಬಂಧಿಸಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, ನಾಲ್ವರು ರೈತರು ಮತ್ತು ಪತ್ರಕರ್ತನ ಸಾವಿಗೆ ಸಂಬಂಧಿಸಿದಂತೆ ಎಸ್‌ಐಟಿ ಮೊದಲ ಎಫ್‌ಐಆರ್‌ನಲ್ಲಿ ಆಶಿಶ್ ಮಿಶ್ರಾ ಸೇರಿದಂತೆ 13 ಜನರನ್ನು ಬಂಧಿಸಿದೆ.

Advertisement

ಹಿಂಸಾಚಾರದ ಸಂದರ್ಭದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಚಾಲಕನ ಸಾವಿಗೆ ಸಂಬಂಧಿಸಿದ ಎರಡನೇ ಎಫ್‌ಐಆರ್‌ನಲ್ಲಿ ಎಸ್‌ಐಟಿ ನಾಲ್ವರನ್ನು ಬಂಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next