Advertisement

ಕುತೂಹಲ ಕೆರಳಿಸಿರುವ 5 ಕ್ಷೇತ್ರಗಳು

05:14 AM Mar 25, 2019 | Vishnu Das |

ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನಿರುವುದು ಎರಡೇ ದಿನ. ಈ ಹಂತದಲ್ಲಿ ರಾಜ್ಯದ ಹಲವು ಕ್ಷೇತ್ರಗಳು ಘಟಾನುಘಟಿಗಳ ಆಡುಂಬೊಲವಾಗಿದೆ. ಒಂದೊಂದು ಕ್ಷೇತ್ರ ಒಂದೊಂದು ಕುತೂಹಲವನ್ನು ಮಡಿಲಲ್ಲಿ ಇಟ್ಟುಕೊಂಡು ರಾಜಕೀಯ ಆಸಕ್ತರನ್ನು ತುದಿಗಾಲಲ್ಲಿ ನಿಲ್ಲಿಸಿದೆ. ಸದ್ಯಕ್ಕೆ ರಾಜ್ಯದ ಕುತೂಹಲ ಕೆರಳಿಸಿರುವ ಐದು ಕ್ಷೇತ್ರಗಳನ್ನು ಇಲ್ಲಿ ನೀಡಲಾಗಿದ್ದು, ಈ ಕ್ಷೇತ್ರಗಳಲ್ಲಿ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ಬದಲಾಗುತ್ತಲೇ ಇವೆ. ಅಲ್ಲಿನ ದಿನ ದಿನದ ಬೆಳವಣಿಗೆಗಳನ್ನು ನಿಮ್ಮ ಮುಂದಿಡಲಿದೆ.

Advertisement

ಮಂಡ್ಯ
ಕಳೆದ ಹದಿನೈದು ದಿನಗಳಿಂದ ಬಿಸಿ ಯೇರುತ್ತಿರುವ ಕದನ ಕಣ ಸೋಮ­ವಾರ ದಿಂದ ಮತ್ತಷ್ಟು ಹಾಟ್‌ ಆಗಲಿದೆ. ಪಕ್ಷೇತರ ಅಭ್ಯರ್ಥಿ ಸುಮ­ಲತಾ ಒಂದು ಹಂತದ ಪ್ರಚಾರ ಮುಗಿ­ಸಿ­ಯಾಗಿದೆ. ಸೋಮ ವಾರ ಜೆಡಿಎಸ್‌ ಅಭ್ಯರ್ಥಿ ನಿಖೀಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ.

ರವಿವಾರ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಕ್ಷೇತ್ರ ದೈವ ಶ್ರೀ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದರು. ಈಚೆಗೆ ಸುಮಲತಾ ನಡೆಸಿರುವ ರ್ಯಾಲಿಗೆ ಸಡ್ಡು ಹೊಡೆದು ಪ್ರತಿರ್ಯಾಲಿ ನಡೆಸಲು ಜೆಡಿಎಸ್‌ ಆಯೋಜಿಸಿದೆ. ಇದರ ಸಿದ್ಧತೆಯ ನೇತೃತ್ವವನ್ನು ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಾರಿಗೆ ಸಚಿವ ತಮ್ಮಣ್ಣ ವಹಿಸಿದ್ದಾರೆ.

ಹಾಸನ
ಈ ಕ್ಷೇತ್ರದಲ್ಲಿ ಈಗಾಗಲೇ ಜೆಡಿಎಸ್‌ ನಿಂದ ರೇವಣ್ಣ ಪುತ್ರ ಪ್ರಜ್ವಲ್‌ ಅವರು ನಾಮಪತ್ರ ಸಲ್ಲಿಸಿ ಯಾಗಿದೆ. ದೇವೇಗೌಡರು ತಮ್ಮ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟು ಕೊಟ್ಟ ಕಾರಣಕ್ಕೆ ರಾಜ್ಯದ ಗಮನ ಸೆಳೆ ದಿರುವ ಈ ಕ್ಷೇತ್ರದಲ್ಲಿ ರಾಜಕೀಯ ಬಿಸಿ ಏರುತ್ತಲೇ ಇದೆ.

ಮಾಜಿ ಸಚಿವ ಎ. ಮಂಜು ಈಗ ಬಿಜೆಪಿ ಸೇರಿಕೊಂಡು ಕದನ ಕಣದ ರಂಗೇರಿಸಿದ್ದಾರೆ. ಸೋಮವಾರ ಮಂಜು ಅವರು ನಾಮ ಪತ್ರ ಸಲ್ಲಿಸಲಿದ್ದು, ಅದಕ್ಕೂ ಮೊದಲು ಕಾರ್ಯಕರ್ತ­ ರನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ಮುಖಂಡ ವಿ.ಶ್ರೀನಿವಾಸ್‌ ಪ್ರಸಾದ್‌ ಮತ್ತು ಬಿಜೆಪಿ ಮುಖಂಡರು ಭಾಷಣ ಮಾಡು ವರು. ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಸೋಮ ವಾರ ಮತ್ತೂಂದು ಸೆಟ್‌ ನಾಮಪತ್ರ ಸಲ್ಲಿಸುವರು.

Advertisement

ತುಮಕೂರು
ತುಮಕೂರು ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ ಯಾಗಿ ಮಾಜಿ ಪ್ರಧಾನಿ ದೇವೇ ಗೌಡ ಸ್ಪರ್ಧಿಸುತ್ತಿರುವುದ ರಿಂದ ಈ ಕ್ಷೇತ್ರ ಇಡೀ ದೇಶದ ಗಮನ ಸೆಳೆಯುತ್ತಿದೆ. ಬಿಜೆಪಿ ಅಭ್ಯರ್ಥಿ  ಜಿ.ಎಸ್‌. ಬಸವರಾಜ್‌ ಅವರು ಪೈಪೋಟಿ ನೀಡಲಿದ್ದಾರೆ. ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿರು ವುದರಿಂದ ಆಕ್ರೋಶ­ಗೊಂಡಿ­   ರುವ ಹಾಲಿ ಸಂಸದ ಎಸ್‌.ಪಿ.­ ಮುದ್ದ ಹನುಮೇ ಗೌಡ ಸೋಮವಾರ ನಾಮಪತ್ರ ಸಲ್ಲಿ ಸಲು ಮುಂದಾ ಗಿ ದ್ದಾರೆ.

ದೇವೇಗೌಡರನ್ನು ಗೆಲ್ಲಿಸುವ ಹೊಣೆ ಹೊತ್ತಿರುವ ಡಿಸಿಎಂ ಡಾ| ಜಿ. ಪರಮೇಶ್ವರ್‌, ದೇವೇ ಗೌಡರು ಈ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಇನ್ನೊಮ್ಮೆ ಮನವಿ ಮಾಡಿರುವುದು ಕುತೂಹಲಕಾರಿ ಬೆಳವಣಿಗೆ. ಮುದ್ದಹನುಮೇಗೌಡ ಬೆಂಬ ಲಿತ ಕಾಂಗ್ರೆಸ್‌ ಕಾರ್ಯಕರ್ತರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ
ರಾಜ್ಯದಲ್ಲಿಯೇ ಹೈವೋಲ್ಟೆàಜ್‌ ಕ್ಷೇತ್ರ ವಾಗಿರುವ ಕಲಬುರಗಿ ಕ್ಷೇತ್ರದಲ್ಲಿ ಚುನಾವಣೆ ಕಾವು ಬಿಸಿಲಿನಂತೆ ಪ್ರಖರ ಗೊಳ್ಳುತ್ತಿದೆ. ಕಾಂಗ್ರೆಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿಜೆಪಿ ಅಭ್ಯರ್ಥಿ ಡಾ| ಉಮೇಶ ಜಾಧವ್‌ ರವಿ ವಾರ ಕ್ಷೇತ್ರದಲ್ಲಿರದೆ ಇದ್ದರೂ ಕಾರ್ಯ ಕರ್ತರ ಮೂಲಕ ಪ್ರಚಾರ ಚುರುಕು­ಗೊಳಿಸಿ ದ್ದಾರೆ. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ಟಿಕೆಟ್‌ ಪಟ್ಟಿ ಅಂತಿಮಗೊಳಿಸುವುದರ ಜತೆಗೆ ಮಹಾರಾಷ್ಟ್ರದ ಎಐಸಿಸಿ ಉಸ್ತುವಾರಿ ಇರುವುದರಿಂದ ಆ ರಾಜ್ಯದ ಟಿಕೆಟ್‌ ಪಟ್ಟಿ ಅಂತಿಮಗೊಳಿಸಲು ದಿಲ್ಲಿ ಯಲ್ಲಿ ಬಿಡಾರ ಹೂಡಿದ್ದಾರೆ. ಬಿಜೆಪಿ ಅಭ್ಯರ್ಥಿ, ಶಾಸಕ ಡಾ| ಉಮೇಶ ಜಾಧವ್‌ ಅವರಿಗೆ ಮಾ. 24 ಜನ್ಮ ದಿನ. ಹೀಗಾಗಿ ಬೆಂಗಳೂರಿ ನಲ್ಲಿಯೇ ಸರಳವಾಗಿ ಜನ್ಮದಿನ ಆಚರಿಸಿಕೊಂಡರು.

ಬೆಂಗಳೂರು ದ.
ಪ್ರತಿ ಸಲವೂ ತುರುಸಿನ ಸ್ಪರ್ಧೆಗೆ ಹೆಸರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರ ಈ ಸಲ ಮತ್ತಷ್ಟು ಕುತೂಹಲ ಕೆರಳಿಸಿದೆ.

ಕೇಂದ್ರದಲ್ಲಿ ಸಚಿವರಾಗಿದ್ದ ಅನಂತಕುಮಾರ್‌ ನಿಧನದ ಅನಂತರ ಅವರ ಪತ್ನಿ ತೇಜಸ್ವಿನಿ ಇಲ್ಲಿ ಸ್ಪರ್ಧಿಸುತ್ತಾರೆ ಎಂದು ಹೇಳ ಲಾಗಿತ್ತು. ಆದರೆ ಬಿಜೆಪಿಯ ಮೊದಲ ಪಟ್ಟಿಯಲ್ಲಿ ಇವರ ಹೆಸರಿಲ್ಲದ ಕಾರಣ ಕುತೂಹಲ ಮತ್ತಷ್ಟು ಕೆರಳಿತು. ಈ ನಡುವೆ, ಸ್ವತಃ ಪ್ರಧಾನಿ ಮೋದಿ ಅವರೇ ಇಲ್ಲಿ ಕಣಕ್ಕಿಳಿಯುತ್ತಾರೆ ಎಂಬ ವರದಿಗಳು ಈ ಕ್ಷೇತ್ರವನ್ನು ಮತ್ತಷ್ಟು ಹಾಟ್‌ ಮಾಡಿದೆ. ಮೋದಿ ಬದಲು ಮತ್ತೋರ್ವ ಸರ್‌ಪ್ರೈಸ್‌ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ರವಿವಾರ ಹರಿದಾಡುತಿತ್ತು. ಈ ಬೆನ್ನಲ್ಲೇ, ಕಾಂಗ್ರೆಸ್‌ ರವಿವಾರ ಬಿ.ಕೆ. ಹರಿಪ್ರಸಾದ್‌ ಅವರನ್ನು ಕಣಕ್ಕಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next