Advertisement
ಕಳೆದ ಎರಡು ವರ್ಷದಲ್ಲಿ ಕೊರೊನಾ ಸೇರಿದಂತೆ ವಿವಿಧ ಕಾರಣಗಳಿಂದ ಸಾವನ್ನಪ್ಪಿದ ಪೊಲೀಸರಿಗೆ ರಾಜ್ಯ ಪೊಲೀಸ್ ಇಲಾಖೆ ವತಿ ಯಿಂದ ಗುರುವಾರ ಚಿತ್ರಕಲಾ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ “ಸ್ಮರಣಾಂಜಲಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Related Articles
Advertisement
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಾತನಾಡಿ, ಯಾವುದೇ ಮನೆಯಲ್ಲಿ ಸಾವು ಸಂಭವಿಸಬಾರದು. ಆದರೂ ಸಂಭವಿಸುವುದನ್ನು ತಡೆಯಲು ಸಾಧ್ಯವಿಲ್ಲ. ಹೀಗೆ ಅಕಾಲಿಕವಾಗಿ ಮೃತಪಟ್ಟಿರುವ ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ ಸಾಂತ್ವನ ಹೇಳಲು ಕಾರ್ಯಕ್ರಮ ಆಯೋಜಿಸಿ ದ್ದೇವೆ. ಕಳೆದ ಎರಡು ವರ್ಷಗಳಲ್ಲಿ ಮೃತಪಟ್ಟಿರುವ ಎಲ್ಲಾ ಪೊಲೀಸರ ಭಾವಚಿತ್ರಮತ್ತು ಕರ್ತವ್ಯದ ಮಾಹಿತಿಯನ್ನು ಒಳಗೊಂಡ ಫೋಟೋಗಳನ್ನು ಮಾಡಿಸಲಾಗಿದೆ.
ಅದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮೂಲಕ ಮೃತರ ಕುಟುಂಬಕ್ಕೆ ಕಳುಹಿಸಿಕೊಡಲಾಗುತ್ತದೆ ಎಂದು ಹೇಳಿದರು. ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯ ದರ್ಶಿ ರಜನೀಶ್ ಗೋಯಲ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸಂಚಾರಿ ವಿಭಾಗದ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಇದ್ದರು.