Advertisement

42 ಲಕ್ಷ ಕದ್ದು ಓಡಿದ್ದ ಕಸ್ಟೋಡಿಯನ್‌ ಬಂಧನ

11:07 AM Nov 12, 2017 | Team Udayavani |

ಬೆಂಗಳೂರು: ಎಟಿಎಂ ಕೇಂದ್ರಗಳಿಗೆ ತುಂಬಬೇಕಿದ್ದ ಹಣದೊಂದಿಗೆ ಪರಾರಿಯಾಗಿದ್ದ ಕಸ್ಟೋಡಿಯನ್‌ನನ್ನು ಕುಮಾರಸ್ವಾಮಿ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್‌ (33) ಬಂಧಿತ. ವಿಲ್ಸನ್‌ ಗಾರ್ಡನ್‌ ನಿವಾಸಿಯಾಗಿರುವ ಈತ 2013ರಿಂದ ರೈಟರ್ಸ್‌ ಸೇಫ್ಗಾರ್ಡ್‌ ಪ್ರೈವೆಟ್‌ ಲಿಮಿಟೆಡ್‌ ಕಂಪನಿಯಲ್ಲಿ ಕಸ್ಟೋಡಿಯನ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ.

Advertisement

ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಗೆ ಸೇರುವ ಐಸಿಐಸಿಐ ಮತ್ತು ಎಚ್‌ಡಿಎಫ್ಸಿ ಎಟಿಎಂ ಕೇಂದ್ರಗಳಿಗೆ ಹಣ ಜಮೆ ಮಾಡುವ ಜವಾಬ್ದಾರಿ ನಿರ್ವಹಿಸುತ್ತಿದ್ದು, ಇತ್ತೀಚೆಗೆ 42.91 ಲಕ್ಷ ರೂ. ಕಳವು ಮಾಡಿದ್ದ. ಜತೆಗೆ ಹನುಮಂತನಗರ ಠಾಣೆ ವ್ಯಾಪ್ತಿಯ ಎಚ್‌ ಡಿಎಫ್ಸಿ ಎಟಿಎಂಗೆ ಹಣ ಜಮೆ ಮಾಡುವಾಗ 1.5 ಕೋಟಿ ರೂ. ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next