Advertisement

ಬಂಧಿಸಿ ಚಿದು ವಿಚಾರಣೆ?

08:00 AM Nov 01, 2018 | Team Udayavani |

ಹೊಸದಿಲ್ಲಿ: ಏರ್‌ಸೆಲ್‌-ಮ್ಯಾಕ್ಸಿಸ್‌ ಹಗರಣದಲ್ಲಿ ಮಾಜಿ ಸಚಿವ ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿಗೆ ಇ.ಡಿ.ವಿರೋಧ ಮಾಡಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಅನುಮತಿ ನೀಡಬೇಕು ಎಂದು ಹೊಸದಿಲ್ಲಿಯ ವಿಶೇಷ ಕೋರ್ಟ್‌ಗೆ ಬುಧವಾರ ಮನವಿ ಮಾಡಿದೆ. ಮಾಜಿ ಸಚಿವರು ವಿಚಾರಣೆಗೆ ಸಹಕರಿಸುತ್ತಿಲ್ಲ. ಹೀಗಾಗಿ ಈ ಸಮಯದಲ್ಲಿ ನಿರೀಕ್ಷಣಾ ಜಾಮೀನು ನೀಡಿದರೆ, ತನಿಖೆಯ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಇ.ಡಿ ವಾದಿಸಿದೆ.  ಹೀಗಾಗಿ ಚಿದಂಬರಂ ಈಗ ಬಂಧನ ಭೀತಿ ಎದುರಿಸುವಂತಾಗಿದೆ. ಈ ಪ್ರಕರಣದ ವಿಚಾರಣೆ ಗುರುವಾರ ಮುಂದುವರಿಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next