Advertisement

ಉಡುಪಿ: ಮೆಡಿಕಲ್ ಶಾಪ್ ಬಂದ್ ಮಾಡುವ ವೇಳೆಯಲ್ಲಿ ಬಂದ ಗ್ರಾಹಕರಿಂದ ಮಾಲಕನ ಮೇಲೆ ಹಲ್ಲೆ

05:30 PM May 11, 2021 | Team Udayavani |

ಉಡುಪಿ: ಕೇಳಿದ ಸಮಯಕ್ಕೆ ಮಾತ್ರೆ ನೀಡದ ಮೆಡಿಕಲ್ ಶಾಪ್  ಮಾಲಕರ ಮೇಲೆ ವ್ಯಕ್ತಿಗಳಿಬ್ಬರು ಹಲ್ಲೆ ಮಾಡಿದ ಘಟನೆ ಸೋಮವಾರ ರಾತ್ರಿ ಉಡುಪಿಯಲ್ಲಿ ನಡೆದಿದೆ.

Advertisement

ಉಡುಪಿಯ ಕೊಡಂಕೂರಿನಲ್ಲಿ ಮೆಡಿಕಲ್ ಶಾಪ್ ವೊಂದನ್ನು ನಡೆಸುತ್ತಿರುವ ಪುಷ್ಪರಾಜ್ ಶೆಟ್ಟಿ ಸೋಮವಾರ ಸರ್ಕಾರದ ಆದೇಶದಂತೆ ರಾತ್ರಿ 8:00 ಗಂಟೆಯ ವೇಳೆಗೆ ಮೆಡಿಕಲ್ ಬಂದ್ ಮಾಡಲು ಹೊರಟಿದ್ದಾರೆ. ಈ ವೇಳೆಯಲ್ಲಿ ಹರೀಶ್ ಹಾಗೂ ಅವರ ಮಗ ಶಾಪ್ ಗೆ ಬಂದು ಬಿಪಿ ಮಾತ್ರೆಯನ್ನು ಕೇಳಿದ್ದಾರೆ. ಸಮಯ ಆಗಿದ್ದರಿಂದ ಶಾಪ್ ಮುಚ್ಚಲು ಹೊರಟ್ಟಿದ್ದ ಪುಷ್ಪರಾಜ್ ಶೆಟ್ಟಿ ನಾಳೆ ಬೆಳಿಗ್ಗೆ ಕೊಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : ಕೋವಿಡ್‌ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್‌ ಸೇವೆ ನೀಡಲು ಮುಂದಾದ ಫಾಲ್ಕನ್‌ ಕ್ಲಬ್‌

ಇದನ್ನು ಕೇಳದ ಗ್ರಾಹಕರು ಮಾತಿಗೆ ಮಾತು ಬೆಳೆಸಿ, ಮಾಲಕರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಹರೀಶ್ ಹಾಗೂ ಅವರ ಮಗ ಕೈಯಿಂದ ಪುಷ್ಪರಾಜ್ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದು, ಹಲ್ಲೆಯಿಂದ ಪುಷ್ಪರಾಜ್ ಮುಖಕ್ಕೆ, ಕಣ್ಣಿನ ಕೆಳಗೆ ಗಾಯವಾಗಿದೆ. ಇಷ್ಟು ಮಾತ್ರವಲ್ಲದೆ ಆರೋಪಿಗಳು  ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ದಾಖಲಾಗಿದೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next