Advertisement

Customs officers: 3.9 ಕೋಟಿ ರೂ.ಮೌಲ್ಯದ ಚಿನ್ನ ವಶ, ಐವರ ಬಂಧನ

10:50 AM Nov 11, 2023 | Team Udayavani |

ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಚಿನ್ನಾಭರಣ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಐವರು ಪ್ರಯಾಣಿಕರನ್ನು ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

ಬೆಳಕಿಗೆ: ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ಸಂದರ್ಭ ದಲ್ಲಿ ವಿವಿಧ ರೀತಿಯಲ್ಲಿ ಚಿನ್ನವನ್ನು ಸಾಗಾ ಣಿಕೆ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ.

ಪ್ರಕರಣ ದಾಖಲು: ಅಧಿಕಾರಿಗಳ ಕಾರ್ಯಾಚರಣೆ ವೇಳೆ ಕಳೆದ 2 ದಿನದಲ್ಲಿ ಒಟ್ಟು 3.9 ಕೋಟಿ ರೂ.ಮೌಲ್ಯದ 5.135 ಕೆ.ಜಿ.ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಕುವೈತ್‌, ದುಬೈ, ಶಾರ್ಜಾ, ಬ್ಯಾಂಕಾಕ್‌ನಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು, ಮಾತ್ರೆ, ಒಳಉಡುಪು, ಮಹಿಳೆಯರ ಪರ್ಸುಗಳಲ್ಲಿ ಚಿನ್ನವನ್ನು ಸಾಗಾಣಿಕೆ ಮಾಡುತ್ತಿದ್ದರು. ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next