Advertisement

ಚಿನ್ನ ಕಳ್ಳಸಾಗಾಟ: ವಿಮಾನ ಸಿಬಂದಿ ಸೆರೆ: 1.16 ಕೆ.ಜಿ. ಚಿನ್ನ ವಶ

08:50 AM Jul 26, 2017 | Team Udayavani |

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಶಾಮೀಲಾಗಿದ್ದ ಖಾಸಗಿ ವಿಮಾನ ಸಂಸ್ಥೆಯ ಸಿಬಂದಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಎಆರ್‌) ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆತನಿಂದ 1,166.5 ಗ್ರಾಂ ತೂಕದ 34.41 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

ಪ್ರಕರಣ ವಿವರ: ಗಲ್ಫ್ ರಾಷ್ಟ್ರದಿಂದ ಮಂಗಳೂರಿಗೆ ಬರುವ ವಿಮಾನದ ಶೌಚಾಲಯದಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳಸಾಗಾಟ ಮಾಡಲಾಗುತ್ತಿತ್ತು. ಆರೋಪಿಯು ತಾಂತ್ರಿಕ ನಿರ್ವಹಣೆ ನೆಪದಲ್ಲಿ ಶೌಚಾಲಯದಲ್ಲಿ ಬಚ್ಚಿಟ್ಟಿದ್ದ ಚಿನ್ನವನ್ನು ತೆಗೆದು ಏಜೆಂಟರಿಗೆ ತಲುಪಿಸುವ ಕೃತ್ಯ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಜು. 25ರಂದು ಕಾರ್ಯಾಚರಣೆ ನಡೆಸಿ ದುಬಾೖಯಿಂದ ಬಂದ ವಿಮಾನದಿಂದ ಈ ಚಿನ್ನವನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ಬಂಧಿಸಿದರು.

ಆರೋಪಿಯು ಕೃತ್ಯವನ್ನು ಒಪ್ಪಿಕೊಂಡಿದ್ದು ಮಂಗಳವಾರ ವಶಕ್ಕೆ ತೆಗೆದುಕೊಳ್ಳಲಾದ ಚಿನ್ನವನ್ನು ಸಂಜೆ ವೇಳೆ ನಗರದ ಮಾಲ್‌ವೊಂದರಲ್ಲಿ ಏಜೆಂಟನಿಗೆ ಒಪ್ಪಿಸಬೇಕಿತ್ತು. ಈ ಕೆಲಸ ನಿರ್ವಹಿಸಲು ಆತ‌ 20,000 ರೂ. ಸಂಭಾವನೆ ಪಡೆಯುತ್ತಿದ್ದ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಎಆರ್‌ ಉಪ ನಿರ್ದೇಶಕ ವಿನಾಯಕ ಭಟ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next