Advertisement

ಕಸದ ಮಾಫಿಯಾಕ್ಕೆ ಕಡಿವಾಣ

11:56 AM Jun 20, 2018 | Team Udayavani |

ಬೆಂಗಳೂರು: ನಗರದ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಕಾರಣವಾಗಿರುವ ಕಸದ ಮಾಫಿಯಾದ ಹಿಂದೆ ಯಾರೇ ಇದ್ದರೂ ಅದನ್ನು ಮಟ್ಟ ಹಾಕಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಬೆಂಗಳೂರು ಪ್ರಸ್‌ಕ್ಲಬ್‌ ಮತ್ತು ಬೆಂಗಳೂರು ವರದಿಗಾರರ ಕೂಟ ಮಂಗಳವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ರಸ್ತೆಯಲ್ಲಿ ಬರುವಾಗ ಎಲ್ಲೆಂದರಲ್ಲಿ ಕಸದ ರಾಶಿ ಕಂಡು ನಾನೇ ತಲೆತಗ್ಗಿಸಬೇಕಾದ ಪರಿಸ್ಥಿತಿ ಇದೆ.

ಈ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಅವಕಾಶವಿದ್ದರೂ ಕಸದ ಮಾಫಿಯಾ ಅದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಕಿಡಿ ಕಾರಿದರು. ತ್ಯಾಜ್ಯ ಸಮಸ್ಯೆ ಹೆಚ್ಚಾಗಿದೆ. ರಸ್ತೆ ಬದಿ ಎಲ್ಲಾ ಕಸ ತುಂಬಿಸಿದ್ದಾರೆ. ಈ ಸಮಸ್ಯೆ ಬಗೆಹರಿಸಲು ಅಡ್ಡಿಪಡಿಸುತ್ತಿರುವ ಮಾಫಿಯಾಗಳ ಬಗ್ಗೆ ತಿಳಿದಿದ್ದೇನೆ. ವೈಜ್ಞಾನಿಕವಾಗಿ ಬಗೆಹರಿಸಲು ಸಾಧ್ಯವಿದ್ದರೂ ಅದನ್ನು ಅನುಷ್ಠಾನಕ್ಕೆ ತರಲು ಈ ಮಾಫಿಯಾ ಅವಕಾಶ ನೀಡುತ್ತಿಲ್ಲ.

ಹೀಗಾಗಿ ಮೊದಲು ಕಸದ ಮಾಫಿಯಾವನ್ನು ಮಟ್ಟಹಾಕಬೇಕಿದೆ. ಆದ್ದರಿಂದ ಈ ಮಾಫಿಯಾದ ಹಿಂದೆ ಯಾರೇ ಇದ್ದರೂ ಅದನ್ನು ಲೆಕ್ಕಿಸದೆ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next