Advertisement

ಕಡಬ: ಅಪಾಯಕಾರಿ ಮರದ ರೆಂಬೆ ತೆರವು

11:28 AM Jul 31, 2022 | Team Udayavani |

ಕಡಬ: ಕಡಬ ಪೇಟೆಯಲ್ಲಿ ರಸ್ತೆಗೆ ಬಾಗಿ ಅಪಾಯವನ್ನು ಆಹ್ವಾನಿಸುವಂತಿದ್ದ ಬೃಹತ್‌ ಮರದ ರೆಂಬೆಗಳನ್ನು ಶನಿವಾರ ತೆರವು ಮಾಡಲಾಯಿತು.

Advertisement

ಕಡಬ ಪ.ಪಂ., ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಪಾಯಕಾರಿ ಮರದ ರೆಂಬೆಗಳನ್ನು ತೆರವುಗೊಳಿಸಿದ್ದಾರೆ. ಪೇಟೆಯ ದೈವಗಳ ಮಾಡದ ಬಳಿ ಇರುವ ಬಸ್‌ ತಂಗುದಾಣದ ಎದುರು ರಸ್ತೆಯ ಬದಿಯಲ್ಲಿರುವ ಬೃಹತ್‌ ಮರದ ಉದ್ದನೆಯ ರೆಂಬೆಗಳು ರಸ್ತೆಯತ್ತ ಚಾಚಿಕೊಂಡು ಯಾವುದೇ ಕ್ಷಣದಲ್ಲಿ ಗಾಳಿ ಮಳೆಗೆ ಮುರಿದು ಬೀಳುವಂತಿತ್ತು. ಮರದ ಕೆಳಗೆ ವಿದ್ಯುತ್‌ ಲೈನ್‌ ಕೂಡ ಹಾದುಹೋಗುತ್ತಿದ್ದು, ಉಪ್ಪಿನಂಗಡಿ-ಕಡಬದ ಮೂಲಕ ಸುಬ್ರಹ್ಮಣ್ಯದತ್ತ ತೆರಳುವ ಸರಕಾರಿ ಬಸ್‌ಗಳು ಪ್ರಯಾಣಿಕರನ್ನು ಇಳಿಸಲು ಮತ್ತು ಹತ್ತಿಸಿಕೊಳ್ಳಲು ಇದೇ ಮರದಡಿಯಲ್ಲಿ ನಿಲ್ಲುತ್ತಿತ್ತು. ಈ ಮರದ ಕೆಳಗೆ ಗೂಡಂಗಡಿಗಳು ಕೂಡ ಇದ್ದು ಮರ ಅಥವಾ ಅದರ ರೆಂಬೆಗಳು ಮುರಿದು ಬಿದ್ದರೆ ಜೀವ ಹಾನಿ ಖಂಡಿತಾ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಉದಯವಾಣಿ ಸುದಿನ ಸಚಿತ್ರ ವರದಿ ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆದಿತ್ತು.

ತೆರವು ಕಾರ್ಯಾಚರಣೆಯ ವೇಳೆ ಕಡಬ ಪ.ಪಂ. ಮುಖ್ಯಾಧಿಕಾರಿ ಪಕೀರ ಮೂಲ್ಯ, ಮೆಸ್ಕಾಂ ಎಇಇ ಸಜಿಕುಮಾರ್‌, ಎಇ ಸತ್ಯನಾರಾಯಣ, ಮೆಸ್ಕಾಂ ಸರ್ವಿಸ್‌ ಸ್ಟೇಶನ್‌ ಜೆಇ ವಸಂತಕುಮಾರ್‌, ಅರಣ್ಯ ಇಲಾಖೆಯ ಸುಬ್ರಹ್ಮಣ್ಯ ಗೌಡ ಅವರು ಮಾರ್ಗದರ್ಶನ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next