Advertisement

KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್‌ಗೆ ಕತ್ತರಿ!

01:11 AM Oct 28, 2024 | Team Udayavani |

ಕೊಪ್ಪಳ/ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಡೆದ ಗ್ರಾಮ ಆಡಳಿತಾಧಿ ಕಾರಿ ಪರೀಕ್ಷೆ ಅಭ್ಯರ್ಥಿಗಳ ಶರ್ಟ್‌ನ ತುಂಬು ತೋಳನ್ನು ಕತ್ತರಿಸಲಾಗಿದೆ.

Advertisement

ಅಲ್ಲದೆ ಮಹಿಳೆಯರ ಮಾಂಗಲ್ಯ, ಓಲೆಗಳನ್ನು ಬಿಚ್ಚಿಸಿ ಪರೀಕ್ಷಿಸಲಾಗಿದೆ. ಅಲ್ಲದೆ ಜೀನ್ಸ್‌ ಪ್ಯಾಂಟ್‌ ಧರಿಸಿ ಬಂದಿದ್ದ ಅಭ್ಯರ್ಥಿ ಗಳನ್ನು ಕೇಂದ್ರದ ಹೊರಗಡೆ ನಿಲ್ಲಿಸಲಾಗಿದೆ. ಮಹಿಳೆಯರ ಮಾಂಗಲ್ಯ, ಕೊರಳಲ್ಲಿನ ಆಭರಣದ ಚೈನ್‌ ಹಾಗೂ ಕಿವಿಯೋಲೆ ಬಿಚ್ಚಿ ಪರೀಕ್ಷೆ ಮಾಡಲಾಗಿದೆ.

ದಾವಣಗೆರೆಯ ಖಾಸಗಿ ಕಾಲೇಜಿನಲ್ಲಿ ಭಾನುವಾರ ಗ್ರಾಮ ಆಡಳಿತ ಅ ಧಿಕಾರಿ ಹುದ್ದೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾರ್ಥಿ ಯೊಬ್ಬರು ಹಿಜಾಬ್‌ ತೆಗೆಯಲು ನಿರಾಕರಿಸಿದ್ದಲ್ಲದೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಮುಖ್ಯ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾರ್ಥಿ ಹಿಜಾಬ್‌ ಧರಿಸಿ ಬಂದಿದ್ದರು.

ಪರೀಕ್ಷಾ ನಿಯ ಮಾನುಸಾರ ಅವಕಾಶ ಇಲ್ಲ ಎಂದು ಪೊಲೀಸರು ತಿಳಿಸಿದರು. ಹಿಜಾಬ್‌ ತೆಗೆಯಲು ನಿರಾಕರಿಸಿದ್ದಲ್ಲದೆ ವಾಗ್ವಾದ ನಡೆಸಿದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೋಷಕರು ಸಹ ವಾಗ್ವಾದ ನಡೆಸಿದರು. ಹಿರಿಯ ಪೊಲೀಸ್‌ ಅ ಧಿಕಾರಿಗಳು ಸ್ಥಳಕ್ಕೆ ಅಗಮಿಸಿ ಪರೀಕ್ಷಾ ನಿಯಮಗಳ ಮನವರಿಕೆ ಮಾಡಿಕೊಟ್ಟ ಅನಂತರ ಹಿಜಾಬ್‌ ತೆಗೆದು ಪರೀಕ್ಷೆ ಬರೆದರು.

ಪರೀಕ್ಷೆಗೆ ಶೇ. 20 ಗೈರು
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಯ (ವಿಎಒ) 1 ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವಿವಾರ ನಡೆಸಿದ ಲಿಖಿತ ಪರೀಕ್ಷೆ ಗೆ ಶೇ. 80ರಷ್ಟು ಮಂದಿ ಹಾಜರಾಗಿದ್ದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ.

Advertisement

ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆಯಿತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಂಡಿದ್ದರು. ಅವರಲ್ಲಿ ಶೇ. 80ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ವಿವರಿಸಿದರು. ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳನ್ನು ಅತಿ ಸೂಕ್ಷ್ಮಎಂದು ಪರಿಗಣಿಸಿದ್ದ ಕಾರಣ ಆ ಜಿಲ್ಲೆಗಳಲ್ಲಿ ಹೆಚ್ಚಿನ ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next