Advertisement

ಹೊಕ್ಕಾಡಿಗೋಳಿ ಪ್ರಾಥಮಿಕ ಶಾಲೆ : ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ

07:34 PM Aug 07, 2017 | Team Udayavani |

ಬೆಳ್ತಂಗಡಿ: ದ.ಕ.ಜಿ.ಪಂ.ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ನೆರವೇರಿತು. ನಾರಾವಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಧರಣೇಂದ್ರ ಕುಮಾರ್, ಹೊಸಂಗಡಿ ಕ್ಷೇತ್ರದ ತಾಲೂಕ್ ಪಂಚಾಯತ್ ಸದಸ್ಯರಾದ ಓಬಯ್ಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿದರು. ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ್ ಹೆಚ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಗ್ರಾ.ಪಂ.ಉಪಾಧ್ಯಕ್ಷೆ ಆಶಾ ಶೆಟ್ಟಿ,ಗ್ರಾಮ ಶಿಕ್ಷಣ ಸಮನ್ವಯ ಸಮಿತಿ ಅಧ್ಯಕ್ಷರಾದ ಹರೀಶ್ ಪೂಜಾರಿ, ಶಾಲಾಭಿವೃಧ್ಧಿ ಸಮಿತಿ ಅಧ್ಯಕ್ಷರಾದ ಸದಾಶಿವ ಪೂಜಾರಿ,ಎಸ್.ಡಿ.ಎಂ.ಸಿ .ಸದಸ್ಯರು.ಪೋಷಕರು ಭಾಗವಹಿಸಿದ್ದರು. ಶಿಕ್ಷಕರಾದ ರವೀಂದ್ರ ರಾವ್ ಸ್ವಾಗತಿಸಿದರು. ಶಿಕ್ಷಕಿ ಮೆಟಿಲ್ಡಾ ಡಿಸೋಜ ವಂದನಾರ್ಪಣೆಗೈದರು. ರಾಜೇಶ್ ನೆಲ್ಯಾಡಿ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next