Advertisement

Gujarat: ಇಬ್ಬರನ್ನು ಬಲಿ ತೆಗೆದುಕೊಂಡ ಬಿಪರ್‌ಜಾಯ್‌ ಚಂಡಮಾರುತ

10:27 AM Jun 16, 2023 | Team Udayavani |

ಭಾವ್​ನಗರ: ಬಿಪರ್‌ಜಾಯ್ ಚಂಡಮಾರುತದಿಂದ ಗುಜರಾತ್‌ನ ಹಲವು ಭಾಗಗಳಲ್ಲಿ ಭಾರೀ ಮಳೆಯನ್ನು ತಂದಿದ್ದು, ಭಾವ್​ನಗರ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಮೇಕೆಗಳನ್ನು ರಕ್ಷಣೆಗೆ ತೆರಳಿದ್ದ ತಂದೆ-ಮಗ ಮೃತಪಟ್ಟ ಘಟನೆ ನಡೆದಿದೆ.

Advertisement

ಬಿಪರ್‌ಜಾಯ್ ಚಂಡಮಾರುತ ಗುಜರಾತ್‌ನ ಕರಾವಳಿಗೆ ಅಪ್ಪಳಿಸಿದ್ದು, ಭಾರಿ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ವರುಣನ ಅಬ್ಬರದಿಂದ ಅವಾಂತರ ಸೃಷ್ಟಿಯಾಗಿದೆ.

ಮಳೆಯಿಂದಾಗಿ ಹತ್ತಾರು ಮರಗಳು ಧರೆಗುರುಳಿ ಬಿದ್ದಿವೆ. ನೂರಾರು ಗ್ರಾಮಗಳಲ್ಲಿ ವಿದ್ಯುತ್ ಸ್ಥಗಿತವಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.


ಚಂಡಮಾರುತದಿಂದ ಹಾನಿಗೆ ಗುರಿಯಾಗಿರುವ ಎಲ್ಲ ಜಿಲ್ಲೆಗಳಲ್ಲಿ ಗುಜರಾತ್‌ ಪೊಲೀಸ್‌ ಇಲಾಖೆ, ಭೂಸೇನೆ, ಎನ್‌ಡಿಆರ್‌ಎಫ್, ರಾಜ್ಯ ವಿಪತ್ತು ನಿರ್ವಹಣ ಪಡೆ, ಐಎಎಫ್, ಭಾರತೀಯ ನೌಕಾದಳಗಳು ವಿವಿಧ ರೀತಿಯಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ನೆರವಾಗುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next