Advertisement

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

12:49 AM Oct 22, 2024 | Team Udayavani |

ಭುವನೇಶ್ವರ: ಬಂಗಾಲಕೊಲ್ಲಿ ಹಾಗೂ ಅಂಡಮಾನ್‌ನಲ್ಲಿ ಸೋಮವಾರ ವಾಯು ಭಾರ ಕುಸಿತ ಉಂಟಾಗಿದೆ.

Advertisement

ಅ.23ರ ಒಳಗಾಗಿ ಅದು ಚಂಡಮಾರುತವಾಗಿ ಮಾರ್ಪಾಡಾಗಲಿದ್ದು, ಒಡಿಶಾದ ಪುರಿ ಹಾಗೂ ಪಶ್ಚಿಮ ಬಂಗಾಲದ ನಡುವೆ ಹಾದು ಹೋಗಲಿದೆ ಐಎಂಡಿ ಹೇಳಿದೆ. ಈ ಹಿನ್ನೆಲೆಯಲ್ಲಿ ಶನಿವಾರದ ವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಒಡಿಶಾದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚು ಕಾಲ ಇರಲಿದೆ. ರಾಜ್ಯದ ಕರಾವಳಿಯಲ್ಲಿ ಧಾರಾಕಾರ ಮಳೆಯಾಗಲಿದ್ದು, ಪ್ರತೀ ಗಂಟೆಗೆ 100 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.

ತಂಡಗಳ ನಿಯೋಜನೆ: ಚಂಡಮಾರುತ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್ನ 25 ತಂಡಗಳನ್ನು ಪಶ್ಚಿಮ ಬಂಗಾಲದಲ್ಲಿ, 11 ತಂಡಗಳನ್ನು ಒಡಿಶಾದಲ್ಲಿ ನಿಯೋಜಿಸ ಲಾಗಿದೆ. ಜತೆಗೆ ಸೇನೆಯ ರಕ್ಷಣ ಹಾಗೂ ಪರಿಹಾರ ತಂಡ, ಕೋಸ್ಟ್‌ ಗಾರ್ಡ್‌ ತಂಡಗಳೂ ಸಿದ್ಧತೆ ನಡೆಸಿವೆ.

ಕರ್ನಾಟಕದಲ್ಲಿ ಮಳೆ: ಚಂಡಮಾರುತ ಪ್ರಭಾವದಿಂದಾಗಿ ಕರ್ನಾಟಕದ ಕರಾ ವಳಿ ಹಾಗೂ ಉತ್ತರ ಒಳನಾಡು, ಗುಜ ರಾತ್‌, ಗೋವಾ, ಮಧ್ಯ ಮಹಾರಾಷ್ಟ್ರ, ಕೇರಳ, ತಮಿಳುನಾಡು, ರಾಯಲ ಸೀಮಾ ಹಾಗೂ ಆಂಧ್ರಪ್ರದೇಶಗಳಲ್ಲಿ ಮಳೆಯಾಗಲಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next