Advertisement

ನಿಸರ್ಗ ಚಂಡಮಾರುತ: ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಸಾಧ್ಯತೆ, ಮುಂಬೈಯಲ್ಲಿ ಕಟ್ಟೆಚ್ಚರ

01:22 PM Jun 01, 2020 | Nagendra Trasi |

ಮುಂಬೈ:ಇತ್ತೀಚೆಗಷ್ಟೇ ಅಂಫಾನ್ ಚಂಡಮಾರುತ ಪಶ್ಚಿಮಬಂಗಾಳದಲ್ಲಿ ಅಪಾರ ಹಾನಿ ಮಾಡಿದ್ದ ಬೆನ್ನಲ್ಲೇ ಇದೀಗ ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಹಾದು ಬರಲಿರುವ ನಿಸರ್ಗ ಚಂಡಮಾರುತದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದಿರುವುದಾಗಿ ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement

ಸೋಮವಾರ ಬೆಳಗ್ಗೆ ವಾಯುಭಾರ ಕುಸಿತವಾಗುವ ನಿಟ್ಟಿನಲ್ಲಿ ಆಗ್ನೇಯ ಹಾಗೂ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 12 ಗಂಟೆಗಳ ಕಾಲಾವಧಿಯಲ್ಲಿ ತೀವ್ರ ವಾಯುಭಾರ ಕುಸಿತ ಸಂಭವಿಸಲಿದ್ದು ಇದು ನಿಸರ್ಗ ಸೈಕ್ಲೋನ್ ಗೆ ಕಾರಣವಾಗಲಿದೆ. ಅಲ್ಲದೇ ಜೂನ್ 3ರಂದು ಮುಂಬೈ ಕರಾವಳಿ ತೀರ ಪ್ರದೇಶದ ಸಮೀಪಿಸುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಸಿದೆ.

ನಿಸರ್ಗ ಚಂಡಮಾರುತ ಮುಂಬೈ ಕರಾವಳಿ ಪ್ರದೇಶದ ಸಮೀಪವೇ ಹಾದು ಹೋಗಲಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಗುಜರಾತ್ ಸರ್ಕಾರ ಹಲವು ಪ್ರದೇಶಗಳಲ್ಲಿ ಸೈಕ್ಲೋನ್ ಪರಿಣಾಮ ಬುಧವಾರ, ಗುರುವಾರ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂಬ ಎಚ್ಚರಿಕೆಯನ್ನು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next