Advertisement

ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಂಭಿರ ಗಾಯ

09:59 PM Aug 05, 2020 | sudhir |

ವಿಜಯಪುರ : ಮನೆಯಲ್ಲಿನ ಅಡುಗೆ ಅನಿಲ್ ಸಿಲಿಂಡರ್ ಸ್ಟೋಟಗೊಂಡ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ವಿಜಯಪುರ ‌ಜಿಲ್ಲೆ ಕೊಲ್ಹಾರ ಪಟ್ಟಣದಲ್ಲಿ ಬುಧವಾರ ಸಂಭವಿಸಿದೆ.

Advertisement

ಕೊಲ್ಹಾರ ಪಟ್ಟಣದ ಹೊರ ಭಾಗದ ತೋಟದ ಮನೆಯಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ಮನೆಯಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯಗೊಂಡಿದ್ದು ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕರಬಸಪ್ಪ ಬೆಳ್ಳುಬ್ಬಿ ಎಂಬವರಿಗೆ ಸೇರಿದ ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಬಾಗಿಲು, ಕಿಟಕಿಗಳು ಛಿದ್ರವಾಗಿವೆ.

ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಜರುಗಿದ್ದು, ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next