Advertisement

ಸಿಲಿಂಡರ್‌ ಸ್ಫೋಟ: ಯುವಕನಿಗೆ ಗಾಯ

12:12 PM Jul 09, 2018 | Team Udayavani |

ಬೆಂಗಳೂರು: ಅಕ್ರಮವಾಗಿ ಗ್ಯಾಸ್‌ ರೀಫಿಲ್ಲಿಂಗ್‌ ಮಾಡುವಾಗ ಸಿಲಿಂಡರ್‌ ಸ್ಫೋಟಗೊಂಡು ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ವಿಜಯನಗರದ ಪಟ್ಟೇಗಾರ ಪಾಳ್ಯದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಫೈರೋಜ್‌ (20) ಗಾಯಗೊಂಡವ.

Advertisement

ಭಾನುವಾರ ಮಧ್ಯಾಹ್ನ 15 ಕೆ.ಜಿ ಸಿಲಿಂಡರ್‌ ನಿಂದ, ಆಟೋಗೆ ಬಳಸುವ 5 ಕೆ.ಜಿ ಸಿಲಿಂಡರ್‌ಗೆ ಗ್ಯಾಸ್‌ ರೀಫಿಲ್‌ ಮಾಡುವಾಗ ಅನಿಲ ಸೋರಿಕೆಯಾಗಿ ಸಿಲಿಂಡರ್‌ ಸ್ಫೋಟಗೊಂಡಿದ್ದು, ಫೈರೋಜ್‌ನ ಮುಖ, ಕೈ ಹಾಗೂ ಕಾಲಿಗೆ ಗಂಭೀರವಾದ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.  

ವಿಜಯನಗರದ ಪಟ್ಟೇಗಾರ್‌ ಪಾಳ್ಯದಲ್ಲಿ ನಿವಾಸಿಯಾಗಿರುವ ಉಮಾಶಂಕರ್‌ ತಮ್ಮ ಮನೆಯ ನೆಲಮಹಡಿಯಲ್ಲಿ ಅಕ್ರಮವಾಗಿ ಗ್ಯಾಸ್‌ ರೀಫಿಲ್ಲಿಂಗ್‌ ಏಜೆನ್ಸಿ ನಡೆಸುತ್ತಿದ್ದಾರೆ. ಈ ಏಜೆನ್ಸಿಯಲ್ಲಿ ಫೈರೋಜ್‌ ಕೆಲಸ ಮಾಡಿಕೊಂಡಿದ್ದ. ಘಟನೆ ಸಂಬಂಧ ಉಮಾಶಂಕರ್‌ ವಿರುದ್ಧ ನಿರ್ಲಕ್ಷ್ಯ ಹಾಗೂ ಅಕ್ರಮವಾಗಿ ಸಿಲಿಂಡರ್‌ ದಾಸ್ತಾನು ಮಾಡಿದ ಆರೋಪದ ಮೇಲೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next